HEALTH TIPS

ವಿಧಿಯೇ ನೀನೆಷ್ಟು ಕ್ರೂರಿ. ಮಗನ ಸಾವಿನ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ

 

            ಆಲಪ್ಪುಳ: ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಕೇಳಿದ ಕೂಡಲೇ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ನಡೆದಿದೆ.

                 ಮೃತ ತಾಯಿಯನ್ನು ಇಂದುಲೇಖಾ ಎಂದು ಗುರುತಿಸಲಾಗಿದೆ.

ಈಕೆ ಆಲಪ್ಪುಳ ಜಿಲ್ಲೆಯ ಪುರಕ್ಕಾಡ್​ ಮೂಲದ ನಿವಾಸಿ. ಆಕೆಯ ಮಗ ನಿಧಿನ್​ (32) ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

                 ನಿಧಿನ್​ ಮೀನುಗಾರಿಕೆ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ 8 ಗಂಟೆಗೆ ನಿಧಿನ್​ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನ ಸುದ್ದಿ ತಿಳಿದುಕೊಡಲೇ ಇಂದುಲೇಖಾ ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಬಿಟ್ಟಿದ್ದಾರೆ.

                    ನಿಧಿನ್​ನನ್ನು ಆಲಪ್ಪುಳದ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ 11 ಗಂಟೆಗೆ ಮೃತಪಟ್ಟನು. ತಾಯಿ ಮತ್ತು ಮಗ ಇಬ್ಬರನ್ನು ಇಂದು ಒಂದೇ ಕಡೆ ಶವ ಸಂಸ್ಕಾರ ಮಾಡಲಾಗಿದೆ.

                 ನಿಧಿನ್​ ಆತ್ಮಹತ್ಯೆ ಕಾರಣ ಏನೆಂಬುದು ಇನ್ನು ತಿಳಿಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries