HEALTH TIPS

ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು: ವಕೀಲ ಕೆ.ಶ್ರೀಕಾಂತ್


                  ಕಾಸರಗೋಡು: ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ 10ನೇ ತರಗತಿವರೆಗೆ ಮಲಯಾಳ ಕಡ್ಡಾಯವಾಗಿ ಓದಿರಬೇಕು ಎಂಬ ನಿಬಂಧನೆಯಿಂದ ಭಾಷಾ ಅಲ್ಪಸಂಖ್ಯಾತರಿಗೆ ವಿನಾಯಿತಿ ನೀಡಬೇಕು ಎಂದು ಬಿಜೆಪಿ ರಾಜ್ಯ ಸಮಿತಿ ಕಾರ್ಯದರ್ಶಿ ವಕೀಲ ಕೆ.ಶ್ರೀಕಾಂತ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
            ಈ ನಿರ್ಧಾರವು ಭಾಷಾ ಅಲ್ಪಸಂಖ್ಯಾತರ ಸಾಂವಿಧಾನಿಕ ಸವಲತ್ತಿನ ಉಲ್ಲಂಘನೆಯಾಘಿದೆ. ಸರ್ಕಾರದ ಈ ಧೋರಣೆಯಿಂದ ಕಾಸರಗೋಡು ಜಿಲ್ಲೆಯ ಕನ್ನಡ ಪ್ರದೇಶದಲ್ಲಿ ಮತ್ತು ಕೇರಳದಲ್ಲಿ ಇನ್ನು ಕೆಲವು ಜಿಲ್ಲೆಗಳಲ್ಲಿ ತಮಿಳು ಮಾಧ್ಯಮದಲ್ಲಿ ಓದಿದವರಿಗೆ ಶಿಕ್ಷಕರ ಹುದ್ದೆ ಸಿಗದಿರುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ರಾಜಕೀಯ ಪಕ್ಷದ ನಾಯಕತ್ವ ತಮ್ಮ ನಿಲುವು ಸ್ಪಷ್ಟಪಡಿಸಬೇಕು. ರಾಜ್ಯದ ಭಾಷಾ ಅಲ್ಪಸಂಖ್ಯಾತರನ್ನು ವಂಚಿಸುವ  ಈ ಕ್ರಮದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು ಎಂದು ಶ್ರೀಕಾಂತ್ ಆಗ್ರಹಿಸಿದ್ದಾರೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries