ಕಾಸರಗೋಡು: ರಾಜ್ಯ ಸರ್ಕಾರದ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಕಾಞಂಗಾಡ್ ಅಲಮಿಪ್ಪಳ್ಳಿಯ ಹೊಸ ಬಸ್ ನಿಲ್ದಾಣ ಆವರಣದಲ್ಲಿ ಮೇ 3 ರಿಂದ 9 ರವರೆಗೆ ಮೈ ಕೇರಳಂ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳ 2023 ನಡೆಯಲಿರುವುದಾಗಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಜಿಲ್ಲಾ ಮಾಹಿತಿ ಕಛೇರಿ ಪಿಆರ್ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೇ 3 ರಂದು ಮಧ್ಯಾಹ್ನ 3ಕ್ಕೆ ಕೋಟಚ್ಚೇರಿ ಹಳೇ ಬಸ್ ನಿಲ್ದಾಣದಿಂದ ಅಲಾಮಿಪಳ್ಳಿ ಹೊಸ ಬಸ್ ನಿಲ್ದಾಣದವರೆಗೆ ನಡೆಯಲಿರುವ ಸಾಂಸ್ಕøತಿಕ ಮೆರವಣಿಗೆಗೆ ಸಚಿವ ಅಹ್ಮದ್ ದೇವರಕೋವಿಲ್ ಚಾಲನೆ ನೀಡುವರು. ಸಂಜೆ 5 ಗಂಟೆಗೆ ಸಚಿವ ಅಹ್ಮದ್ ದೇವಾರಿ ಮೇಳ ಉದ್ಘಾಟಿಸುವರು. ಶಾಸಕ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು. ಸಂಸದ ರಾಜಮೋಹನ್ ಉಣ್ಣಿತ್ತಾನ್, ಶಾಸಕರಾದ ಎ.ಕೆ.ಎಂ.ಅಶ್ರಫ್, ಎನ್.ಎ.ನೆಲ್ಲಿಕುನ್ನು, ವಕೀಲ ಸಿ.ಎಚ್.ಕುಞಂಬು, ಎಂ.ರಾಜಗೋಪಾಲನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬಾಬಿ ಬಾಲಕೃಷ್ಣನ್, ನಗರಸಭಾ ಅಧ್ಯಕ್ಷೆ ಕೆ.ವಿ ಸುಜಾತಾ, ಬ್ಲಾಕ್ ಪಂಚಾಯಿತಿ ಅಧ್ಯಕ್ಷರು ಪಾಲ್ಗೊಳ್ಳುವರು. ಪ್ರತಿದಿನ ವಿವಿಧ ಸೆಮಿನಾರ್, ಸಾಂಸ್ಕøತಿಕ ಕಾರ್ಯಕ್ರಮ ತ್ಯಾಜ್ಯ ನಿರ್ವಹಣೆ ಬಗ್ಗೆ ಮಾಹಿತಿ, ಸಂಗೀತ ಸಂಜೆ ಕಾರ್ಯಖ್ರಮ ಜರುಗಲಿರುವುದು. ಮೇಳಕ್ಕೆ ಪ್ರವೇಶ ಸಂಪೂರ್ಣ ಉಚಿತವಾಗಿರಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಎಡಿಎಂ ಎ.ಕೆ ರಮೇಂದ್ರನ್, ಆರ್ಡಿಒ ಅತುಲ್ ಎಸ್. ನಾಥ್, ಹಣಕಾಸು ಅಧಿಕಾರಿ ಎಂ.ಶಿವಪ್ರಕಾಶನ್ ನಾಯರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಧಾನ ವ್ಯವಸ್ಥಾಪಕ ಕೆ.ಸಜಿತ್ ಕುಮಾರ್, ಜಿಲ್ಲಾ ಮಾಹಿತಿ ಅಧಿಕಾರಿ ಎಂ.ಮಧುಸೂದನನ್ ಉಪಸ್ಥಿತರಿದ್ದರು.