ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಲ ಝಳ ಹೆಚ್ಚಾಗಲಿದ್ದು, ಉಷ್ಣಾಂಶದಲ್ಲಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆ ಕಂಡುಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಹೇಳಿದೆ.
ಮುಂದಿನ ಐದು ದಿನಗಳ ಅವಧಿಯಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇಲ್ಲ ಎಂದು ಐಎಂಡಿ ಟ್ವೀಟ್ ಮಾಡಿದೆ.
ತಮಿಳುನಾಡು, ಪುದುಚೇರಿ, ಕಾರೈಕಲ್ನಲ್ಲಿ ಭಾನುವಾರ ಹಾಗೂ ಸೋಮವಾರ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆ ಬೀಳಲಿದೆ. ಮಂದಿನ ಐದು ದಿನಗಳ ಅವಧಿಯಲ್ಲಿ ಕೇರಳದಲ್ಲಿ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.
ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಹಾಗೂ ಛತ್ತೀಸಗಢಗಳಲ್ಲಿ ಜೋರಾಗಿ ಗಾಳಿ ಬೀಸಲಿದ್ದು, ಗುಡುಗು,ಸಿಡಿಲು ಸಹಿತ ಮಳೆ ಬೀಳಲಿದೆ. ಜಾರ್ಖಂಡ್ನಲ್ಲಿ ಮಂಗಳವಾರ ಮಳೆ ಬೀಳಲಿದ್ದು, ನಂತರ, ಕ್ರಮೇಣ ಕಡಿಮೆಯಾಗಲಿದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ.