HEALTH TIPS

8ನೇ ತರಗತಿ ವಿದ್ಯಾರ್ಥಿ ತೀಚಾಮುಂಡಿ ಕೋಲ ಕಟ್ಟಿದ ಘಟನೆ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಮಕ್ಕಳ ಹಕ್ಕು ಆಯೋಗ


               ಕಣ್ಣೂರು: ಕಣ್ಣೂರಿನಲ್ಲಿ 8ನೇ ತರಗತಿ ವಿದ್ಯಾರ್ಥಿ ತೀ-ಚಾಮುಂಡಿ ದೈವಕೋಲ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ಹಕ್ಕು ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ.
             ಮಾಧ್ಯಮ ವರದಿಗಳ ಆಧಾರದ ಮೇಲೆ ಆಯೋಗದ ಅಧ್ಯಕ್ಷ ಕೆ.ವಿ.ಮನೋಜ್ ಕುಮಾರ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
          ಆಯೋಗವು ಸಿಡಬ್ಲ್ಯುಸಿ ನಿರ್ದೇಶಕರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ತುರ್ತು ವರದಿ ಸಲ್ಲಿಸುವಂತೆ ಸೂಚಿಸಿದೆ. ಕಣ್ಣೂರು ಚಿರಕ್ಕಲ್ ಪೆರುಂಗಾಲಿಯಾಟ್ಟಂನಲ್ಲಿ 8ನೇ ತರಗತಿಯ ವಿದ್ಯಾರ್ಥಿ ತೀಚಾಮುಂಡಿ ಕೋಲ ಕಟ್ಟಿದ್ದನೆಂಬುದು ದೂರು. ತೀಚಾಮುಂಡಿ ಕೋಲದಲ್ಲಿ ಅಗ್ನಿ ಕುಂಡಕ್ಕೆ ಜಿಗಿಯುವುದು ಪ್ರಮುಖವಾಗಿದೆ.
          ವಿದ್ಯಾರ್ಥಿ ಕೋಲ ಕಟ್ಟುತ್ತಿರುವ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕು ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಘಟನೆಯ ಕುರಿತು ತಕ್ಷಣ ವರದಿ ಸಲ್ಲಿಸುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries