ಕಾಸರಗೋಡು: ಒಂದು ಸಮಾಜ ಸಮಗ್ರ ಅಭಿವೃದ್ಧಿ ಸಾಧಿಸಬೇಕಾದರೆ ಒಗ್ಗಟ್ಟು ಬಲಿಷ್ಠವಾಗಬೇಕು. ಒಂದೊಂದು ಸಮಾಜಕ್ಕೆ ತನ್ನದೇ ಆದ ಸಂಸ್ಕøತಿಯ ಹಿನ್ನೆಲೆ ಇದೆ. ಈ ಹಿನ್ನೆಲೆಯನ್ನು ಮೈಗೂಡಿಸಿಕೊಂಡು ಸಮಾಜ ಒಂದೇ ಸೂರಿನಡಿಯಲ್ಲಿ ಒಗ್ಗೂಡಿದಾಗ ತನ್ನಿಂದ ತಾನೇ ಸರ್ಕಾರದ ಎಲ್ಲಾ ಸವಲತ್ತುಗಳು ಲಭಿಸಲು ಸಾಧ್ಯ. ಕಳೆದ 12 ವರ್ಷಗಳಿಂದ ಸಂಘಟನೆಯನ್ನು ಬಲಿಷ್ಠಗೊಳಿಸಲು ಯತ್ನಿಸುತ್ತಿರುವ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘದ ಅಣಂಗೂರು ಉಪಸಂಘದ ಕೈಂಕರ್ಯ ಶ್ಲಾಘನೀಯ ಎಂದು ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರೊ.ಡಾ.ಬಾಲಕೃಷ್ಣ ಶ್ರೀನಿವಾಸ ಮದ್ದೋಡಿ ಅವರು ಹೇಳಿದರು.
ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಅಣಂಗೂರು ಉಪ ಸಂಘ ಮತ್ತು ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ ವೃಂದ ಅಣಂಗೂರು ಇದರ 12 ನೇ ವಾರ್ಷಿಕೋತ್ಸವ ಮತ್ತು ಮಹಾಸಭೆÉಯನ್ನು ಅಣಂಗೂರಿನ ಶ್ರೀ ಶಾರದಾಂಬಾ ಸಭಾ ಭÀವನದಲ್ಲಿ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದರು.
ಅಣಂಗೂರು ಉಪಸಂಘದ ಅಧ್ಯಕ್ಷ ಕೆ.ಕಮಲಾಕ್ಷ ಅಣಂಗೂರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಅಭಿಜ್ಞ್ಯ ಎಜುಕೇಶನ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇದರ ನಿರ್ದೇಶಕ ಅಭಿಲಾಷ್ ಕ್ಷತ್ರಿಯ, ರಾಮಕ್ಷತ್ರಿಯ ಭಜನಾ ವೃಂದ ಉಡುಪಿ ಇದರ ಸದಸ್ಯೆ ಜಯಶ್ರೀ ಯಶವಂತ್ ಭಾಗವಹಿಸಿ ಶುಭÀಹಾರೈಸಿದರು. ಜಿಲ್ಲಾ ಸಂಘದ ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ, ಜಿಲ್ಲಾ ಮಹಿಳಾ ಸಂಘದ ಅಧ್ಯಕ್ಷೆ ಉಷಾ ನವೀನ್ಚಂದ್ರ, ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ ವೃಂದದ ಅಧ್ಯಕ್ಷೆ ಬಬಿತಾ ಸಂತೋಷ್, ಜಿಲ್ಲಾ ಯುವ ಸಂಘದ ಕಾರ್ಯದರ್ಶಿ ತೇಜಶ್ರೀ, ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ ವೃಂದದ ಗೌರವಾಧ್ಯಕ್ಷೆ ಆಶಾ ರಾಧಾಕೃಷ್ಣ, ಲಕ್ಷ್ಮಣಾನಂದ ಸ್ವಸಹಾಯ ಸಂಘದ ಅಧ್ಯಕ್ಷ ಕೆ.ರಾಜೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಧನ ಸಹಾಯ ವಿತರಣೆ, ಗೌರವಾರ್ಪಣೆ, ಹಿರಿಯ ದಂಪತಿಗಳಿಗೆ ಗೌರವ, ವಾರ್ಷಿಕ ವರದಿ, ಲೆಕ್ಕಪತ್ರ ಮಂಡನೆ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ, ನೂತನ ಸಮಿತಿ ರಚನೆ ಹಾಗು ಕೊನೆಯಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಜರಗಿತು.
ಲಕ್ಷ್ಮಣಾನಂದ ಸರಸ್ವತಿ ಮಹಿಳಾ ವೃಂದದ ಕಾರ್ಯದರ್ಶಿ ಸುಕನ್ಯಾ ಹರೀಶ್ ಸ್ವಾಗತಿಸಿದರು. ಹರೀಶ್ ಕುಮಾರ್ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು. ಅಣಂಗೂರು ಉಪಸಂಘದ ಕಾರ್ಯದರ್ಶಿ ವೆಂಕಟೇಶ್ ಬಿ. ವಂದಿಸಿದರು.
ಒಗ್ಗಟ್ಟಿನಿಂದ ಸಮಗ್ರ ಅಭಿವೃದ್ಧಿ ಸಾಧ್ಯ : ಪ್ರೊ.ಡಾ.ಬಾಲಕೃಷ್ಣ ಶ್ರೀನಿವಾಸ ಮದ್ದೋಡಿ
0
April 18, 2023