HEALTH TIPS

ಭ್ರಷ್ಟಾಚಾರ ಮುಕ್ತ ಭಾರತವೇ ಸಿಬಿಐ ಜವಾಬ್ದಾರಿ: ಪ್ರಧಾನಿ ಮೋದಿ

 

               ನವದೆಹಲಿ: ಪ್ರಜಾಪ್ರಭುತ್ವ ಮತ್ತು ನ್ಯಾಯಕ್ಕೆ ಭ್ರಷ್ಟಾಚಾರವು ಅತಿ ದೊಡ್ಡ ತೊಡಕಾಗಿ ಪರಿಣಮಿಸಿದ್ದು, ದೇಶವನ್ನು ಭ್ರಷ್ಟಾಚಾರ ಮುಕ್ತಗೊಳಿಸುವುದೇ ಸಿಬಿಐನ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ತಿಳಿಸಿದ್ದಾರೆ.

                   ಕೇಂದ್ರೀಯ ತನಿಖಾ ದಳದ ವಜ್ರ ಮಹೋತ್ಸವ ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರ ವಿರುದ್ಧ ಹೋರಾಡುವ ರಾಜಕೀಯ ಇಚ್ಛಾಶಕ್ತಿ ಎಂದಿಗೂ ಕುಗ್ಗುವುದಿಲ್ಲ. ಯಾವ ಭ್ರಷ್ಟರನ್ನು ಸುಮ್ಮನೆ ಬಿಡಬಾರದು ಎಂಬುದು ದೇಶ ಮತ್ತು ಅದರ ನಾಗರಿಕರ ಆಶಯವಾಗಿದೆ ಎಂದು ಒತ್ತಿ ಹೇಳಿದರು.

                    ಭ್ರಷ್ಟಾಚಾರ ಚಿಕ್ಕದಾದ ಅಪರಾಧವಲ್ಲ. ಬಡವರ ಹಕ್ಕುಗಳನ್ನು ಕಸಿದುಕೊಳ್ಳತ್ತಿದ್ದು, ಅನೇಕ ಅಪರಾಧಿಗಳ ಹುಟ್ಟಿಗೆ ಕಾರಣವಾಗುತ್ತದೆ ಎಂದು ಹೇಳಿದರು.

                 ಕಪ್ಪು ಹಣ ಹಾಗೂ ಬೇನಾಮಿ ಆಸ್ತಿಯ ವಿರುದ್ಧ ತ್ವರಿತವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಭ್ರಷ್ಟರ ಹೊರತಾಗಿ ಭ್ರಷ್ಟಾಚಾರದ ಕಾರಣಗಳ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಹೇಳಿದರು.

                 ವೃತ್ತಿಪರ ಹಾಗೂ ದಕ್ಷ ಸಂಸ್ಥೆಗಳ ಹೊರತಾಗಿ ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣ ಅಸಾಧ್ಯ. ಈ ನಿಟ್ಟಿನಲ್ಲಿ ಸಿಬಿಐಗೆ ಮಹತ್ತರ ಜವಾಬ್ದಾರಿ ಇದೆ ಎಂದು ಹೇಳಿದರು.

                  ಇಂದಿಗೂ ಇತ್ಯರ್ಥವಾಗದ ಹಲವು ಪ್ರಕರಣಗಳು ಸಿಬಿಐ ವಹಿಸಬೇಕೆಂಬ ಬೇಡಿಕೆಗಳಿವೆ ಎಂದು ಅವರು ಉಲ್ಲೇಖ ಮಾಡಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries