HEALTH TIPS

ಪಾಂಗೋಡು : ಸಾಮೂಹಿಕ ಮಹಾ ಚಂಡಿಕಾ ಯಾಗ ಕೋಟೆಕಣಿ ಉಪ ಸಮಿತಿ ಸಭೆ





            ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ 19 ರಂದು ನಡೆಯಲಿರುವ  ಸಾಮೂಹಿಕ ಮಹಾ ಚಂಡಿಕಾ ಯಾಗದ ಕೋಟೆಕಣಿ ಉಪ ಸಮಿತಿ ಸಭೆ ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ  ಭವನ ಸಭಾಂಗಣದಲ್ಲಿ ಜರಗಿತು.
             ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘದ ಅಧ್ಯಕ್ಷ  ಕಮಲಾಕ್ಷ ಕಲ್ಲುಗದ್ದೆ ಅಧ್ಯಕ್ಷತೆ ವಹಿಸಿದರು. ಯಾಗ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟರಮಣ ಹೊಳ್ಳ ಅವರು ಯಾಗದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪಾಂಗೋಡು ಶ್ರೀ ಕ್ಷೇತ್ರ ಸಮಿತಿ ಅಧ್ಯಕ್ಷ ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಧರ್ಮಸ್ಥಳ ಶೌರ್ಯ ಸಮಿತಿ ಅಧ್ಯಕ್ಷ ಜ್ಞಾನೇಶ್ ಆಚಾರ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿಧಿ ಶೋಭಾ ಕೂಡ್ಲು, ಯಾಗ ಸಮಿತಿ ಗೌರವಾಧ್ಯಕ್ಷ ಹರಿದಾಸ ಜಯಾನಂದ ಕುಮಾರ್, ಯಾಗ ಮಹಿಳಾ ಸಮಿತಿ ಅಧ್ಯಕ್ಷೆ ಆಶಾ ರಾಧಾಕೃಷ್ಣ ಅಣಂಗೂರು, ಕೋಶಾಧಿಕಾರಿ ಕಮಲಾಕ್ಷ ಅಣಂಗೂರು ಮೊದಲಾದವರು ಯಾಗ ಕಾರ್ಯಕ್ರಮದ ಯಶಸ್ವಿಗಾಗಿ ಸಲಹೆ ಸೂಚನೆಗಳನ್ನು ನೀಡಿದರು.
          ಗೌರವಾಧ್ಯಕ್ಷ ಕೃಷ್ಣ ಪ್ರಸಾದ್ ಕೋಟೆಕಣಿ, ಉಮಾ ಕಮಲಾಕ್ಷ ಬೀರಂತಬೈಲ್, ಶೋಭಾ ಕಾಳ್ಯಾಂಗಾಡು, ಶಿಲ್ಪ ವರಪ್ರಸಾದ್, ರಾಜೇಶ್ ಕೋಟೆಕಣಿ, ಯೋಗೀಶ್ ಕೋಟೆಕಣಿ, ಚಂಚಲಾಕ್ಷಿ ಕೋಟೆಕಣಿ, ಜಯಶ್ರೀ ದಿವಾಕರ್, ಕಾರ್ಯದರ್ಶಿ ವಸಂತ ಕೆರೆಮನೆ, ಸಂಧ್ಯಾರಾಣಿ ಟೀಚರ್ ಮುಂತಾದವರಿದ್ದರು. ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬೇಕಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸುಕನ್ಯಾ ಅಣಂಗೂರು ವಂದಿಸಿದರು.






 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries