ಕುಂಬಳೆ: ಮುಜುಂಗಾವು ಶ್ರೀ ಭಾರತೀವಿದ್ಯಾಪೀಠದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ಪಂದನ ಕಾರ್ಯಕ್ರಮವು ಇತ್ತೀಚೆಗೆ ವಿವಿಧ ಚಟುವಟಿಕೆಗಳೊಂದಿಗೆ ನೆರವೇರಿತು. ವಿದ್ಯಾಲಯದ ಆಡಳಿತ ಸಮಿತಿ ಅಧ್ಯಕ್ಷ ಎಸ್.ಎನ್. ರಾವ್ ಮುನ್ನಿಪ್ಪಾಡಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕ ರಾಮಚಂದ್ರ ಎಂ, ಪಿ ಎಸ್ ನಗರ ಸೂರಂಬೈಲು ಮಾತನಾಡಿ ವಿದ್ಯಾರ್ಥಿಗಳ ನಡೆನುಡಿಗಳ ಬಗ್ಗೆ ಸಲಹೆಗಳನ್ನಿತ್ತರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಮಾತನಾಡಿದರು. ಶಾಲಾಮುಖ್ಯೋಪಾಧ್ಯಾಯ ಶ್ಯಾಂ ಭಟ್ ದರ್ಭೆಮಾರ್ಗ, ಅಧ್ಯಾಪಿಕೆ ಚಿತ್ರಾ ಸರಸ್ವತಿ ಸ್ಪಂದನದ ಮೂಲೋದ್ದೇಶವನ್ನು ತಿಳಿಸಿದರು. ಅಧ್ಯಾಪಕರು ವಿದ್ಯಾರ್ಥಿಗಳಿಗೆ ಶುಭಾಶಂಸನೆಗೈದರು. ವಿದ್ಯಾರ್ಥಿಗಳಿಗೆ ಜ್ಞಾನದ ಪ್ರತೀಕವಾದ ಉರಿಯುವ ದೀಪಗಳನ್ನು ಸ್ಮರಣಿಕೆಗಳಾಗಿ ನೀಡಲಾಯಿತು. ವಿದ್ಯಾರ್ಥಿಗಳೇ ಕಾರ್ಯಕ್ರಮ ಸಂಯೋಜಿಸಿದ್ದರು.
ಮುಜುಂಗಾವು ವಿದ್ಯಾಪೀಠದಲ್ಲಿ ಸ್ಪಂದನ ಕಾರ್ಯಕ್ರಮ
0
April 06, 2023
Tags