ಬದಿಯಡ್ಕ: ದೀನದಲಿತರ ಆಶಾಕಿರಣ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ನಾವೆಲ್ಲರೂ ನವಭಾರತ ನಿರ್ಮಾಣಕ್ಕೆ ಬದ್ಧರಾಗಬೇಕೆಂದು ಸಮಾಜ ಹಿತಚಿಂತಕ ರಾಮಚಂದ್ರ ಮಾರ್ಪನಡ್ಕ ಕರೆ ನೀಡಿದರು.
ಅಂಬೇಡ್ಕರ್ ವಿಚಾರವೇದಿಕೆಯ ವತಿಯಿಂದ ಬದಿಯಡ್ಕದಲ್ಲಿ ನಡೆದ ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಹಾರಾರ್ಪಣೆಗೈದು ಮಾತನಾಡಿದರು.
ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾ ಬಾರಡ್ಕ ಉದ್ಘಾಟಿಸಿದರು. ವೇದಿಕೆಯ ಸ್ಥಾಪಕ ಸದಸ್ಯ ನಾರಾಯಣ ಬಾರಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉದಯಕುಮಾರ್ ಮುಂಡೋಡು, ಶಂಕರ ಸ್ವಾಮಿಕೃಪಾ ಅತಿಥಿಗಳಾಗಿ ಉಪಸ್ಥಿತರಿದ್ದರು. ವಿಜಯಕುಮಾರ್ ಬಾರಡ್ಕ, ವಿಶ್ವನಾಥ ಕೆ.ಬಿ. ಶುಭಹಾರೈಸಿದರು. ನಿವೃತ್ತ ಗ್ರಾಮಾಧಿಕಾರಿ ಕೃಷ್ಣ.ಡಿ.ದರ್ಬೆತ್ತಡ್ಕ ಉಪಸ್ಥಿತರಿದ್ದರು. ಸುರೇಖಾ ಬಾರಡ್ಕ ಸ್ವಾಗತಿಸಿ, ಸುಂದರ ಬಾರಡ್ಕ ವಂದಿಸಿದರು. ಅಂಬೇಡ್ಕರ್ ವಿಚಾರ ವೇದಿಕೆಯು ಪ್ರತಿವರ್ಷವೂ ಅಂಬೇಡ್ಕರ್ ಜನ್ಮದಿನ ಮತ್ತು ಪರಿನಿರ್ಮಾಣ ದಿನವನ್ನು ಆಚರಿಸಿಕೊಂಡು ಬರುತ್ತಿದೆ.
ಬದಿಯಡ್ಕದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ
0
April 18, 2023