HEALTH TIPS

ಉಮ್ಮನ್ ಚಾಂಡಿ ಕುಟುಂಬ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ: ವೈದ್ಯಕೀಯ ಮಂಡಳಿಯಿಂದ ಮೌಲ್ಯಮಾಪನಗೈದು ಮಾಹಿತಿ ನೀಡಬೇಕು: ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡಿದ ಸಹೋದರ


            ಕೊಟ್ಟಾಯಂ: ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರ ಚಿಕಿತ್ಸೆ ಪ್ರಗತಿಯನ್ನು ವೈದ್ಯಕೀಯ ಮಂಡಳಿ ಮತ್ತೊಮ್ಮೆ ಮೌಲ್ಯಮಾಪನ ಮಾಡಲು  ಅವರ ಸಹೋದರ ಒತ್ತಾಯಿಸಿದ್ದರೆ.
              ಸರ್ಕಾರಕ್ಕೆ ಕಳುಹಿಸಿದ ಪತ್ರದಲ್ಲಿ ಸಹೋದರ ಅಲೆಕ್ಸ್ ವಿ. ಚಾಂಡಿ ಮನವಿ ಮಾಡಿದ್ದಾರೆ. ಉಮ್ಮನ್ ಚಾಂಡಿ ಅವರಿಗೆ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
           ಸರ್ಕಾರ ರಚಿಸಿರುವ ವೈದ್ಯಕೀಯ ಮಂಡಳಿಯು ಉಮ್ಮನ್ ಚಾಂಡಿ ಚಿಕಿತ್ಸೆ ಪಡೆಯುತ್ತಿರುವ ಬೆಂಗಳೂರಿನ ಎಚ್‍ಸಿಜಿ ಆಸ್ಪತ್ರೆಯನ್ನು ಭೇಟಿ ಮಾಡಬೇಕು. ಆಪ್ತ ಬಂಧುಗಳ ವರ್ತನೆಯಿಂದ ವೈಜ್ಞಾನಿಕ ಹಾಗೂ ಸಮರ್ಪಕ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯಕೀಯ ಮಂಡಳಿ ರಚಿಸಿ ಪ್ರತಿ ದಿನದ ಚಿಕಿತ್ಸೆಯ ಪ್ರಗತಿಯನ್ನು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ತಿಳಿಸುವ ವ್ಯವಸ್ಥೆ ಆಗಬೇಕು ಎಂದು ಒತ್ತಾಯಿಸಲಾಗಿದೆ.
           ಕೇರಳದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಉಮ್ಮನ್ ಚಾಂಡಿ ಅವರ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆ ಪ್ರಗತಿಯ ಬಗ್ಗೆ ತಿಳಿದುಕೊಳ್ಳುವ ಅವಕಾಶ ನನಗಿತ್ತು. ಆದರೆ ಬೆಂಗಳೂರಿಗೆ ವರ್ಗಾವಣೆಯಾದ ನಂತರ ಏನೂ ತಿಳಿಯುವುದಿಲ್ಲ. ಹಾಗಾಗಿ ಚಿಕಿತ್ಸೆ ಬಗ್ಗೆ ಸಂಬಂಧಿಕರಿಗೂ ಮಾಹಿತಿ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
          ಉಮ್ಮನ್‍ಚಾಂಡಿ ಅವರ ಕುಟುಂಬ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಎಂದು ಅಲೆಕ್ಸ್ ವಿ. ಚಾಂಡಿ ಆರೋಪಿಸಿದ್ದರು. ಬಳಿಕ ರಾಜ್ಯ ಸರ್ಕಾರವು ಉಮ್ಮನ್ ಚಾಂಡಿಯನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿತ್ತು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries