ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್)ದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ನ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದ್ದು, ಸ್ಟಾಲಿನ್ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.
"ಈ ಸಂಬಂಧ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ" ಎಂದು ನ್ಯಾಯಮೂರ್ತಿಗಳಾದ ವಿ ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿಥಾಲ್ ಅವರ ಪೀಠ ತೀರ್ಪು ಪ್ರಕಟಿಸುವಾಗ ಹೇಳಿದೆ.
ರಾಜ್ಯ ಸರ್ಕಾರದ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಎಲ್ಲಾ ಮಾರ್ಗದಲ್ಲೂ ಪಥ ಸಂಚಲನ ನಡೆಸಲು ಸಾಧ್ಯವಿಲ್ಲ ಮತ್ತು ಇದಕ್ಕಾಗಿ ಸಂಘಕ್ಕೆ "ಸ್ಥಾಪಿತ ಹಕ್ಕು" ಇಲ್ಲ ಎಂದು ಪ್ರತಿಪಾದಿಸಿದರು.
ರಾಜ್ಯ ಸರ್ಕಾರದ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಎಲ್ಲಾ ಮಾರ್ಗದಲ್ಲೂ ಪಥ ಸಂಚಲನ ನಡೆಸಲು ಸಾಧ್ಯವಿಲ್ಲ ಮತ್ತು ಇದಕ್ಕಾಗಿ ಸಂಘಕ್ಕೆ "ಸ್ಥಾಪಿತ ಹಕ್ಕು" ಇಲ್ಲ ಎಂದು ಪ್ರತಿಪಾದಿಸಿದರು.