HEALTH TIPS

ಮೋದಿಯ ಯುವಂ ಕಾರ್ಯಕ್ರಮದಂತೆ ಕಾಂಗ್ರೆಸ್ಸ್ ನಿಂದಲೂ ಕಾರ್ಯಕ್ರಮ


               ತಿರುವನಂತಪುರಂ: ಯುವಕರೊಂದಿಗೆ ಪ್ರಧಾನಿ ಸಂವಾದ ನಡೆಸುವ ಯುವಂ ಕಾರ್ಯಕ್ರಮದಂತೆಯೇ ಕಾಂಗ್ರೆಸ್ ಕೂಡಾ ಅಂತದೇ ಕಾರ್ಯಕ್ರಮ ಆಯೋಜಿಸಲಿದೆ. ಯುವಂ ಕಾರ್ಯಕ್ರಮದಂತೆ ರಾಹುಲ್ ಗಾಂಧಿ ಕಾರ್ಯಕ್ರಮ ಆಯೋಜಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಹೇಳಿದ್ದಾರೆ.
           ಮೇ ತಿಂಗಳಿನಲ್ಲಿಯೇ ಕಾಂಗ್ರೆಸ್ ಕಾರ್ಯಕ್ರಮವನ್ನು ಸಹ ನಡೆಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಯುವಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುತ್ತದೆ.
           ಎರಡನೇ ಚಿಂತನ ಶಿಬಿರವು ಮೇ 9 ಮತ್ತು 10 ರಂದು ಚರಲಕುನ್‍ನಲ್ಲಿ ನಡೆಯಲಿದೆ. ಚಿಂತನ್ ಶಿಬಿರದಲ್ಲಿ ಕಾಂಗ್ರೆಸ್ ಎದುರಿಸುತ್ತಿರುವ ರಾಜಕೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.  ಯುಡಿಎಫ್ ನ ಎಲ್ಲ ವರ್ಗಗಳನ್ನು ಒಗ್ಗೂಡಿಸಲು ಅಂದು ಚರ್ಚೆ ನಡೆಸಲಾಗುವುದು ಎಂದು ಸುಧಾಕರನ್ ತಿಳಿಸಿದರು. ಪ್ರಧಾನಿಯವರ ಕೇರಳ ಭೇಟಿ ಹಾಗೂ ಯುವಂ ಕಾರ್ಯಕ್ರಮವನ್ನು ವಿರೋಧಿಸಲು ಕಾಂಗ್ರೆಸ್ ಮತ್ತು ಸಿಪಿಎಂ ಮುಂದಾಗಿವೆ.
        ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಕೆ ಆಂಟನಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries