HEALTH TIPS

ರಾಹುಲ್ ನಾಳೆ ವಯನಾಡ್‌ಗೆ; ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಮೊದಲ ಭೇಟಿ

 

             ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ, ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್‌ ಗಾಂಧಿ ಅವರು ತಮ್ಮ ಕ್ಷೇತ್ರ ವಯನಾಡ್‌ನಲ್ಲಿ ನಾಳೆ (ಏಪ್ರಿಲ್‌ 11) ರೋಡ್‌ ಶೋ ನಡೆಸಲಿದ್ದಾರೆ.

                 ಅನರ್ಹಗೊಂಡ ಬಳಿಕ ಮೊದಲ ಸಲ ಅವರು ವಯನಾಡ್‌ಗೆ ಆಗಮಿಸುತ್ತಿರುವುದರಿಂದ ಅದ್ದೂರಿ ಸ್ವಾಗತ ಕೋರಲು ಕೇರಳ ಕಾಂಗ್ರೆಸ್‌ ಭಾರಿ ತಯಾರಿ ನಡೆಸಿದೆ.

                ಮೋದಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ರಾಹುಲ್‌ ಗಾಂಧಿ ದೋಷಿ ಎಂದು ಸೂರತ್‌ ನ್ಯಾಯಾಲಯವು ಮಾರ್ಚ್‌ 23ರಂದು ತೀರ್ಪು ನೀಡಿತ್ತು. 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಇದರ ಬೆನ್ನಲ್ಲೇ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

                ಸದ್ಯ ಜಾಮೀನಿನ ಮೇಲೆ ಹೊರಗಿರುವ ರಾಹುಲ್‌, ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸೆಷನ್ಸ್‌ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯು ಏಪ್ರಿಲ್‌ 13ರಂದು ನಡೆಯಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries