HEALTH TIPS

ಸ್ವಪ್ನಾ ಸುರೇಶ್ ಗೆ ಸರ್ಕಾರದಿಂದ ವೈಯಕ್ತಿಕ ಕಿರುಕುಳ: ಹೈಕೋರ್ಟ್; ಪೋಲೀಸರು ದಾಖಲಿಸಿದ್ದ ಎಫ್‍ಐಆರ್‍ಗೆ ತಡೆ


             ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್‍ಗೆ ರಾಜ್ಯ ಸರ್ಕಾರ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
          ನ್ಯಾಯಮೂರ್ತಿ ಬೆಚು ಕುರಿಯನ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.
        ತಳಿಪರಂಬ ಸಿಪಿಎಂ ವಲಯ ಕಾರ್ಯದರ್ಶಿ ಮೋಹನ್ ರಾಜ್ ಅವರು ಸ್ವಪ್ನಾ ಸುರೇಶ್ ವಿರುದ್ಧ ಸಲ್ಲಿಸಿದ್ದ ದೂರಿನ ವಿರುದ್ಧ ಸ್ವಪ್ನಾ ಹೈಕೋರ್ಟ್ ಮೆಟ್ಟಿಲೇರಿದಾಗ ನ್ಯಾಯಾಲಯ ಇದನ್ನು ಗಮನಿಸಿದೆ.
          ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಅವರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸ್ವಪ್ನಾ ಸುರೇಶ್ ಅವಮಾನಿಸಲು ಯತ್ನಿಸಿದ್ದಾರೆ ಎಂದು ತಳಿಪರಂಬ ಪೆÇಲೀಸರು ದಾಖಲಿಸಿದ್ದ ಎಫ್‍ಐಆರ್‍ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
         ಮುಖ್ಯಮಂತ್ರಿ, ಅವರ ಕುಟುಂಬ ಸದಸ್ಯರು ಮತ್ತು ಸಿಪಿಎಂ ರಾಜ್ಯ ಕಾರ್ಯದರ್ಶಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅವಹೇಳನ ಮಾಡಿದ್ದಕ್ಕಾಗಿ ತಳಿಪರಂಬ ಸಿಪಿಎಂ ಏರಿಯಾ ಕಾರ್ಯದರ್ಶಿ ಮೋಹನ್ ರಾಜ್ ಅವರು ಸ್ವಪ್ನಾ ಸುರೇಶ್ ವಿರುದ್ಧ ಪೆÇಲೀಸ್ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೆÇಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಎಫ್‍ಐಆರ್ ರದ್ದುಗೊಳಿಸುವಂತೆ ಸ್ವಪ್ನಾ ಹೈಕೋರ್ಟ್ ಮೆಟ್ಟಿಲೇರಿದ್ದರು.
          ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಧೀಶ ಬೆಚು ಕುರಿಯನ್, ಸರ್ಕಾರವು ಸ್ವಪ್ನಾ ಅವರಿಗೆ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದೆ ಎಂದು ಅಭಿಪ್ರಾಯಪಟ್ಟರು. ಸ್ವಪ್ನಾ ವಿರುದ್ಧದ ತಳಿಪರಂಬ ಪೊಲೀಸರ ಎಫ್‍ಐಆರ್ ಅನ್ನು ತಡೆಹಿಡಿಯುವ ಮೂಲಕ, ಹೈಕೋರ್ಟ್ ಸ್ವಪ್ನಾ ವಿರುದ್ಧ ಇಂತಹ ವೈಯಕ್ತಿಕ ದಾಳಿಗಳ ವಿರುದ್ಧ ಎಚ್ಚರಿಕೆ ನೀಡಿದರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries