ಕುಂಬಳೆ: 2022-23ನೆಯ ಸಾಲಿನ ಕೇರಳ ರಾಜ್ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. 2 ಮಂದಿವಿದ್ಯಾರ್ಥಿಗಳು ಎಲ್ಲಾ ಹತ್ತು ವಿಷಯಗಳಲ್ಲೂ ಎಪ್ಲಸ್ ಪಡೆದು ಶಾಲೆಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿರುತ್ತಾರೆ. ಶಾಲೆಯ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾ, ಶಿಕ್ಷಕ ವೃಂದ, ಆಡಳಿತ ಮಂಡಳಿ, ಹಾಗೂ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ. ಮನೀಶ್ ಕುಮಾರ್ ಮತ್ತು ಜತನ್ ಸಿ.ವಿ ಎಲ್ಲಾ ವಿಷಯದಲ್ಲಿ ಎಪ್ಲಸ್ ಅಂಕ ಪಡೆದಿರುತ್ತಾರೆ.