ಮಲಪ್ಪುರಂ: 22 ಜನರ ಸಾವಿಗೆ ಕಾರಣವಾದ ದೋಣಿ ಅಪಘಾತದಲ್ಲಿ ನೌಕಾಪಡೆ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ.
ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಹುಡುಕಾಟಕ್ಕಾಗಿ ತಾನೂರ್ ತಲುಪಿದೆ. ಮೂವರು ಡೈವರ್ಗಳ ತಂಡ ಸ್ಥಳಕ್ಕೆ ತಲುಪಿದೆ. ಎನ್ಡಿಆರ್ಎಫ್ನೊಂದಿಗೆ ಚರ್ಚೆ ನಡೆಸಿದ ಬಳಿಕ ನೌಕಾಪಡೆಯ ತಜ್ಞರ ತಂಡ ಶೋಧ ಕಾರ್ಯ ಆರಂಭಿಸಿತು. ಎನ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳ ಬೆಳಗ್ಗೆಯಿಂದಲೇ ಶೋಧ ಕಾರ್ಯ ಆರಂಭಿಸಿತ್ತು.
21 ಸದಸ್ಯರ ಎನ್ಡಿಆರ್ಎಫ್ ತಂಡ ಮತ್ತು ಅಗ್ನಿಶಾಮಕ ದಳ ಶೋಧ ಕಾರ್ಯ ನಡೆಸಿದೆ. ಆದರೆ ನದಿಯಲ್ಲಿನ ಒಳಹರಿವು ರಕ್ಷಣಾ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿತು. ಎಂದು ಎನ್ಡಿಆರ್ಎಫ್ ತಂಡ ತಿಳಿಸಿದೆ.
21 ಮಂದಿಯ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದೆ. ಹತ್ತು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಸುಮಾರು 40 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಅಪಘಾತಕ್ಕೀಡಾಗಿದೆ. ಮೊದಲ ಹಂತದಲ್ಲಿ ಎಂಟು ಜನರನ್ನು ರಕ್ಷಿಸಲಾಗಿದೆ. ಮೃತರ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಮೃತರ ಕುಟುಂಬ ಸದಸ್ಯರಿಗೆ ತಕ್ಷಣದ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ಘೋಷಿದ್ದಾರೆ. ರಾಜ್ಯ ಸರ್ಕಾರ ಹತ್ತು ಲಕ್ಷ ರೂ.ಘೋಷಿಸಿದೆ.