HEALTH TIPS

ಮಣಿಪುರ | 60 ಮಂದಿ ಸಾವು , 1,700 ಮನೆಗಳು ಭಸ್ಮ

              ಇಂಫಾಲ: 'ಹಿಂಸಾಚಾರದಲ್ಲಿ 60 ಮಂದಿ ಮೃತಪಟ್ಟಿದ್ದು, 231 ಜನರು ಗಾಯಗೊಂಡಿದ್ದಾರೆ. ದೇವಸ್ಥಾನಗಳು, ಚರ್ಚ್‌ಗಳು ಸೇರಿದಂತೆ 1,700 ಮನೆಗಳು ಬೆಂಕಿಗಾಹುತಿಯಾಗಿವೆ' ಎಂದು ಮಣಿಪುರದ ಮುಖ್ಯಮಂತ್ರಿ ಎನ್‌. ಬಿರೇನ್ ಸಿಂಗ್‌ ತಿಳಿಸಿದ್ದಾರೆ.

            ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ, ತೀವ್ರಗಾಯಗೊಂಡವರಿಗೆ ತಲಾ ₹ 2 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗೊಂಡವರ ಚಿಕಿತ್ಸೆಗೆ ತಲಾ ₹ 25 ಸಾವಿರ ಪರಿಹಾರ ನೀಡಲು ಸಚಿವ ಸಂಪುಟ ನಿರ್ಧರಿಸಿದೆ' ಎಂದು ತಿಳಿಸಿದರು.

                 'ಇದು ಆಕಸ್ಮಿಕವಾಗಿ ನಡೆದ ಘಟನೆ. ಶಾಂತಿ ನೆಲೆಸಲು ಜನರು ಸಹಕರಿಸಬೇಕು. ಮನೆ ಕಳೆದುಕೊಂಡ ಕುಟುಂಬಗಳಿಗೆ ₹ 2 ಲಕ್ಷ ಪರಿಹಾರ ನೀಡಲಿದ್ದು, ಸೂರು ನಿರ್ಮಿಸಿಕೊಡಲಾಗುವುದು' ಎಂದು ಭರವಸೆ ನೀಡಿದರು.

                  ಪೊಲೀಸ್‌ ಸಿಬ್ಬಂದಿ ಬಳಿಯಿದ್ದ 1,041 ಗನ್‌ಗಳನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಈ ಪೈಕಿ 214 ಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳನ್ನು ಕೂಡಲೇ ವಾಪಸ್‌ ನೀಡಬೇಕು. ಇಲ್ಲವಾದರೆ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯಲಾಗುವುದು ಎಂದು ಎಚ್ಚರಿಸಿದರು.

ಕಿಡಿಗೇಡಿಗಳ ವಿರುದ್ಧ ಒಟ್ಟು 218 ಎಫ್‌ಐಆರ್‌ಗಳು ದಾಖಲಾಗಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries