HEALTH TIPS

ಬದಿಯಡ್ಕ ನವಜೀವನ ಸಮಿತಿಯ 9ನೇ ವಾರ್ಷಿಕೋತ್ಸವ

                ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಾಸರಗೋಡು ತಾಲೂಕು ಬದಿಯಡ್ಕ ವಲಯ ಇವರಿಂದ ಸೌಪರ್ಣಿಕ ನವಜೀವನ ಸಮಿತಿ ಬದಿಯಡ್ಕ ಇವರ 9ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನ ದಯಾ ವಿಶೇಷ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು.

          ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಪ್ರಸ್ತಾವಿಕವಾಗಿ ಮಾತನಾಡಿ, ವಿಶೇಷ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಶುಭಹಾರೈಸಿದರು.

             ಸೌಪರ್ಣಿಕ ನವಜೀವನ ಸಮಿತಿಯ ಅಧ್ಯಕ್ಷ ಜಯರಾಮ ಪಾಟಾಳಿ ತಮ್ಮ ಅನುಭವವನ್ನು ವ್ಯಕ್ತಪಡಿಸಿದರು. ಈ ವಿಶೇಷ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹ ನಿರ್ದೇಶಕÀ  ಫಾದರ್ ರೋಹನ್ ಲೋಬೋ, ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಅಶ್ವತ್ ಪೂಜಾರಿ ಲಾಲ್‍ಬಾಗ್, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ತಾಲೂಕು ಯೋಜನಾಧಿಕಾರಿ ಮುಖೇಶ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಮೋಹನ್, ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿ, ಬದಿಯಡ್ಕ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷರು ಅಖಿಲೇಶ್ ನಗುಮುಖ, ಜೈವಂತ್ ಪಟಗಾರ್, ಜನಜಾಗೃತಿ ಉಡುಪಿ ಪ್ರಾದೇಶಿಕ ವಿಭಾಗದ  ಯೋಜನಾಧಿಕಾರಿ ಗಣೇಶ್ ಆಚಾರ್ಯ,  ಬದಿಯಡ್ಕ ವಲಯದ ಮೇಲ್ವಿಚಾರಕ ದಿನೇಶ್, ಶಿಬಿರಾಧಿಕಾರಿಗಳಾದ ದೇವಿಪ್ರಸಾದ್, ನಂದಕುಮಾರ್ ಪಿ ಪಿ, ವಿದ್ಯಾಧರ್, ಆರೋಗ್ಯ ಸಹಾಯಕಿ ಪಿಲೋಮಿನಾ ಡಿ.ಸೋಜಾ, ನೇತ್ರಾವತಿ, ದಯಾ ವಿಶೇಷ ಮಕ್ಕಳ ಶಾಲೆಯ ಎಲ್ಲಾ ಸಿಬ್ಬಂದಿಗಳು, ಸೌಪರ್ಣಿಕ ನವಜೀವನ ಸಮಿತಿಯ ಅಧ್ಯಕ ಜಯರಾಮ ಪಾಟಾಳಿ ಮತ್ತು ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.

          ಸಂಸ್ಥೆಗೆ ಸೌಪರ್ಣಿಕ ನವಜೀವನ ಸಮಿತಿಯ ವತಿಯಿಂದ ರೂಪಾಯಿ 50,000 ಮೊತ್ತವನ್ನು ದೇಣಿಗೆಯಾಗಿ ನೀಡಲಾಯಿತು. ಎಲ್ಲಾ ಮಕ್ಕಳಿಗೆ ಸಮಿತಿಯ ಸದಸ್ಯರುಗಳು ಸಿಹಿ ತಿಂಡಿಯನ್ನು ಹಂಚಿ, ಬಹುಮಾನಗಳನ್ನು ನೀಡಿ, ಊಟೋಪಚಾರದೊಂದಿಗೆ ವಾರ್ಷಿಕೋತ್ಸವದ ಸಂತೋಷವನ್ನು ಹಂಚಿಕೊಂಡರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries