HEALTH TIPS

ಸೈಬರ್​ ದಾಳಿಗೆ ಮನನೊಂದು ಬದುಕು ಅಂತ್ಯಗೊಳಿಸಿದ ಯುವತಿ

               ಕೊಟ್ಟಾಯಂ: ಸೈಬರ್​ ದಾಳಿಯಿಂದ ಮನನೊಂದು ಯುವತಿಯೊಬ್ಬಳು ಸಾವಿನ ಹಾದಿ ಹಿಡಿದಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಮೃತ ಯುವತಿಯ ಮಾಜಿ ಬಾಯ್​ಫ್ರೆಂಡ್​ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


              ಮೃತ ಯುವತಿಯನ್ನು ಅಥಿರಾ ಎಂದು ಗುರುತಿಸಲಾಗಿದೆ. ಆಕೆಯ ಮಾಜಿ ಬಾಯ್​ಫ್ರೆಂಡ್​ ಅರುಣ್​ ವಿದ್ಯಾಧರಣ್​ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಅಥಿರಾ ಕೊತ್ತನಲ್ಲೂರಿನ ನಿವಾಸಿ. ಸೋಮವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದರು.

 

            ಅಥಿರಾ ಮಣಿಪುರದಲ್ಲಿರುವ ಕೇರಳ ಮೂಲದ ಐಎಎಸ್​ ಅಧಿಕಾರಿ ಅವರ ಅತ್ತಿಗೆ. ಕೊಟ್ಟಾಯಂನ ಖಾಸಗಿ ಸಂಸ್ಥೆಯಲ್ಲಿ ವೆಬ್​ ಡಿಸೈನರ್​ ಆಗಿ ಕೆಲಸ ಮಾಡುತ್ತಿದ್ದರು. ಅಥಿರಾ ಅವರ ಸ್ನೇಹಿತನಾಗಿದ್ದ ಅರುಣ್ ವಿದ್ಯಾಧರನ್ ಫೇಸ್​ಬುಕ್ ಮೂಲಕ ಆಕೆಯ ವಿರುದ್ಧ ಸೈಬರ್ ದಾಳಿ ನಡೆಸಿದ್ದ.

                           ನಿರಂತರವಾಗಿ ನಿಂದನೆ

              ಇತ್ತೀಚೆಗಷ್ಟೇ ಆಥಿರಾ, ಅರುಣ್​ ಜತೆಗಿನ ಸ್ನೇಹವನ್ನು ತ್ಯಜಿಸಿದ್ದರು. ಅಥಿರಾಗೆ ಮದುವೆ ಪ್ರಸ್ತಾಪಗಳು ಬರುತ್ತಿವೆ ಎಂಬುದನ್ನು ತಿಳಿದುಕೊಂಡ ಅರುಣ್, ಸಾಮಾಜಿಕ ಜಾಲತಾಣ ಮೂಲಕ ಅಥಿರಾಳನ್ನು ನಿರಂತರವಾಗಿ ನಿಂದಿಸಿದ್ದಾನೆ. ಅಲ್ಲದೆ, ಫೇಸ್​ಬುಕ್​ನಲ್ಲಿ ಆಕೆಯ ಚಿತ್ರಗಳನ್ನೂ ಪೋಸ್ಟ್​ ಮಾಡಿ ಮಾನಹಾನಿಕರವಾದ ಅಶ್ಲೀಲ ಬರಹಗಳನ್ನು ಬರೆದಿದ್ದ.

               ಇದು ಅಥಿರಾಳ ಗಮನಕ್ಕೆ ಬಂದು ತಕ್ಷಣ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅರುಣ್ ವಿದ್ಯಾಧರನ್ ಸದ್ಯ ಪರಾರಿಯಾಗಿದ್ದಾನೆ. ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries