ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಹ್ವಾನ ನೀಡದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಹ್ವಾನ ನೀಡದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನವನ್ನು ಲೋಕಾರ್ಪಣೆ ಮಾಡುವ ಸಮಾರಂಭವನ್ನು ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ (ಎಎಪಿ), ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ 19 ವಿರೋಧ ಪಕ್ಷಗಳು ಬಹಿಷ್ಕರಿಸಿವೆ. ಇದರ ಬೆನ್ನಲ್ಲೇ ರಾಹುಲ್ ಹೇಳಿಕೆ ನೀಡಿದ್ದಾರೆ.
'ರಾಷ್ಟ್ರಪತಿಯವರನ್ನು ಉದ್ಘಾಟನೆಗೆ ಕರೆತರದಿರುವುದು ಅಥವಾ ಅವರಿಗೆ ಆಹ್ವಾನ ನೀಡದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ. ಸಂಸತ್ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ' ಎಂದು ರಾಹುಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರು ನೂತನ ಸಂಸತ್ ಕಟ್ಟಡವನ್ನು ಮೇ 28 ರಂದು (ಶುಕ್ರವಾರ) ಉದ್ಘಾಟಿಸಲಿದ್ದಾರೆ.
ಇದನ್ನು ವಿರೋಧಿಸಿರುವ ವಿರೋಧ ಪಕ್ಷಗಳು, ರಾಷ್ಟ್ರಪತಿಯವರು ದೇಶದ ಮುಖ್ಯಸ್ಥರಷ್ಟೇ ಅಲ್ಲ. ಅವರು ಸಂಸತ್ತಿನ ಅವಿಭಾಜ್ಯ ಅಂಗ. ಹಾಗಾಗಿ ಪ್ರಧಾನಿ ಬದಲು ರಾಷ್ಟ್ರಪತಿಯವವರೇ ಸಂಸತ್ ಭವನದ ಲೋಕಾರ್ಪಣೆ ಮಾಡಬೇಕು ಎಂದು ಆಗ್ರಹಿಸಿವೆ.