ಕಾಸರಗೋಡು: ಜಿಲ್ಲಾ ಸಾಮಾಜಿಕ ನ್ಯಾಯ ಇಲಾಖೆ ನೇತೃತ್ವದಲ್ಲಿ ರಾಜ್ಯ ಅಂಗವಿಕಲರ ಆಯುಕ್ತಾಲಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಅಂಗವಿಕಲರ ಹಕ್ಕು ಕಾಯ್ದೆ-2016ರ ಕುರಿತು ಸರ್ಕಾರಿ ನೌಕರರು ಹಾಗೂ ಜನಪ್ರತಿನಿಧಿಗಳಿಗೆ ಶುಕ್ರವಾರ ಜಾಗೃತಿ ತರಗತಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಾಗೃತಿ ತರಗತಿಯನ್ನು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಸಿ.ಕೃಷ್ಣಕುಮಾರ್ ಉದ್ಘಾಟಿಸಿದರು. ಜಿಲ್ಲಾ ಕಾನೂನು ಅಧಿಕಾರಿ ಮುಹಮ್ಮದ್ ಕುಂಞÂ್ಞ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯಾಡಳಿತ ಇಲಾಖೆ ಸಹಾಯಕ ನಿರ್ದೇಶಕ ಬಿ.ಎನ್.ಸುರೇಶ್, ಶಿಕ್ಷಣ ಉಪನಿರ್ದೇಶಕ ಸಿ.ಕೆ.ವಾಸು, ಜಿಲ್ಲಾ ವಾರ್ತಾಧಿಕಾರಿ ಎಂ.ಮಧುಸೂದನನ್ ಮಾತನಾಡಿದರು. ಜಿಲ್ಲಾ ಸಾಮಾಜಿಕ ನ್ಯಾಯ ಇಲಾಖೆ ಅಧಿಕಾರಿ ಶೀಬಾ ಮುಮ್ತಾಜ್ ಸ್ವಾಗತಿಸಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಿಭಾಗಾಧಿಕಾರಿ ಕೇಶವನ್ ವಂದಿಸಿದರು.
ಬಳಿಕ ನಡೆದ ಜಾಗೃತಿ ತರಗತಿಯಲ್ಲಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಇಎನ್ಟಿ ವಿಭಾಗದ ಶ್ರವಣಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ. ಸಮೀರ್ ಪುತ್ತೇರಿ ಜಾಗೃತಿ ತರಗತಿ ನಡೆಸಿದರು. ಅಂಗವಿಕಲರ ಹಕ್ಕುಗಳ ಕಾಯಿದೆ, 2016 ವಿಶೇಷ ಹಕ್ಕು-ಆಧಾರಿತ ಕಾನೂನಾಗಿದೆ. ವಿಕಲಚೇತನರ ಔದಾರ್ಯದಿಂದ ಯಾವುದೂ ಇಲ್ಲ ಮತ್ತು ಅವರಿಗೆ ಯಾವುದೇ ಷರತ್ತುಗಳಿಲ್ಲದೆ ಎಲ್ಲಾ ಅನುಕೂಲಗಳನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು. ಜಿಲ್ಲಾ ಪರೀಕ್ಷಾಧಿಕಾರಿ ಪಿ.ಬಿಜು ವಂದಿಸಿದರು.