HEALTH TIPS

ಜಿಲ್ಲಾ ಆಸ್ಪತ್ರೆಯಲ್ಲಿ ನೀರಿನ ಕೊರತೆ: ನೀಗಿಸಲು ತುರ್ತು ಕ್ರಮ-ಜಿಪಂ ಆಡಳಿತ ಸಮಿತಿ ಸಭೆ ತೀರ್ಮಾನ

 



        ಕಾಸರಗೋಡು: ಕಾಞಂಗಾಡು ಚೆಮ್ಮಟ್ಟಂವಯಲ್‍ನ ಜಿಲ್ಲಾಸ್ಪತ್ರೆಯಲ್ಲಿ ನೀರಿನ ತೀವ್ರ ಕೊರತೆಯ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ತುರ್ತು ಕ್ರಮಗಳನ್ನು ಕೈಗೊಂಡಿದೆ. ನೀರಿನ ಕೊರತೆಯನ್ನು ನೀಗಿಸಲು ವಿವಿಧ ಸಂಸ್ಥೆಗಳ ಮೂಲಕ ಟ್ಯಾಂಕ್‍ನಲ್ಲಿ ನೀರನ್ನು ಪಂಪ್ ಮಾಡಲಾಗುತ್ತದೆ. ವಾಹನದ ಬಾಡಿಗೆ ಮತ್ತು ನೀರಿನ ಶುಲ್ಕವನ್ನು ಒಳಗೊಂಡಂತೆ 20000 ರೂ. ದೈನಂದಿನ ಖರ್ಚು ನೀರಿಗಾಗಿ ತಗುಲುತ್ತಿದ್ದು,  ಜಿಲ್ಲಾ ಆಸ್ಪತ್ರೆಯಲ್ಲಿ ನೀರಿನ ಕೊರತೆ ನೀಗಿಸಲು ಜಿಲ್ಲಾ ಪಂಚಾಯಿತಿ ತುರ್ತು ಕ್ರಮ ಕೈಗೊಂಡಿದೆ

          ಜಿಲ್ಲಾ ಪಂಚಾಯಿತಿ ಆಡಳಿತ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ. ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸಿ ಮಾತನಡಿ,  ಮಾಸಿಕ ವೆಚ್ಚಗಳ ಸಂದರ್ಭದಲ್ಲಿ ಅನಿಶ್ಚಿತ ನಿಧಿಯಿಂದ ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಯಿತು. ಇದಕ್ಕೂ ಮುನ್ನ ರಾಜಕೀಯ, ಯುವಜನ ಮತ್ತು ಸ್ವಯಂ ಸೇವಾ ಸಹಕಾರ ಸಂಘಗಳ ಸಭೆ ನಡೆಸಿ ನೀರಿನ ಅಭಾವ ನೀಗಿಸಲು ನೆರವು ಕೋರಲಾಯಿತು. 

           ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಆಡಳಿತ ಸಮಿತಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಯೋಜನೆಗಳ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಾನವಾಸ್ ಪಾದೂರು, ಅಭಿವೃದ್ಧಿ ಕಾರ್ಯಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾಕೃಷ್ಣನ್, ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿನೋಜ್ ಚಾಕೊ, ಲೋಕೋಪಯೋಗಿ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಶಕುಂತಲಾ, ಜಿಲ್ಲಾ ಪಂಚಾಯಿತಿ ಸದಸ್ಯರುಸಿ.ಜೆ.ಸಜಿತ್, ಜೋಮೋನ್ ಜೋಸ್, ಕೆ.ಕಮಲಾಕ್ಷಿ, ನಾರಾಯಣ ನಾಯ್ಕ್, ಎಂ.ಮನು, ಜಾಸ್ಮಿನ್ ಕಬೀರ್, ಜಮೀಲಾ ಸಿದ್ದಿಕ್, ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries