ತಿರುವನಂತಪುರ: ಕೇರಳ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆÀ. ಭಾರೀ ಗಾಳಿ ಮತ್ತು ಮಳೆಯಾಗುವ ಸಾಧ್ಯತೆಯಿರುವುದರಿಂದ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.
ಹವಾಮಾನ ಕೇಂದ್ರದ ಪ್ರಕಾರ ಗಾಳಿಯ ವೇಗ ಗಂಟೆಗೆ 40 ರಿಂದ 45 ಕಿ.ಮೀ.ಗಳಷ್ಟಿರಲಿದೆ. ಹೀಗಾಗಿ ಇಂದಿನಿಂದ ಭಾನುವಾರದವರೆಗೆ ನಿಷೇಧ ಹೇರಲಾಗಿದೆ.
ಏತನ್ಮಧ್ಯೆ, ಮೇ 26 ರಿಂದ 28 ರವರೆಗೆ ಕೇರಳ-ಲಕ್ಷದ್ವೀಪ ಕರಾವಳಿಯಲ್ಲಿ ಬಲವಾದ ಗಾಳಿ ಮತ್ತು ಕೆಟ್ಟ ಹವಾಮಾನ ಉಂಟಾಗುವ ಸಾಧ್ಯತೆಯಿದೆ. ಅಧಿಸೂಚನೆಯ ಪ್ರಕಾರ, ಮೇ 26 ಮತ್ತು 27 ರಂದು ತಮಿಳುನಾಡು ಕರಾವಳಿ, ಮನ್ನಾರ್ ಕೊಲ್ಲಿ ಮತ್ತು ಕನ್ಯಾಕುಮಾರಿ ಕರಾವಳಿಯಲ್ಲಿ ಬಲವಾದ ಗಾಳಿ ಬೀಸಲಿದೆ. ಮೇ 28 ರಂದು ತಮಿಳುನಾಡು ಕರಾವಳಿ, ಮನ್ನಾರ್ ಕೊಲ್ಲಿ, ಕನ್ಯಾಕುಮಾರಿ ಕರಾವಳಿ ಮತ್ತು ಶ್ರೀಲಂಕಾ ಕರಾವಳಿಯ ನೈಋತ್ಯ ಕೊಲ್ಲಿಯಲ್ಲಿ ಗಾಳಿ ಬೀಸಲಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯ ದಿನಾಂಕದಂದು ಈ ಪ್ರದೇಶಗಳಲ್ಲಿ ಮೀನುಗಾರಿಕೆ ನಡೆಸಬಾರದು ಎಂದು ತಿರುವನಂತಪುರ ಜಿಲ್ಲಾಧಿಕಾರಿ ಜೆರೊಮಿಕ್ ಜಾರ್ಜ್ ತಿಳಿಸಿದ್ದಾರೆ. ಇದೇ ವೇಳೆ, ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ನಿಬರ್ಂಧವಿಲ್ಲ.