ಲಖನೌ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರವನ್ನು ಮುಂದಿನ ವರ್ಷ ಜನವರಿಯಲ್ಲಿ ಲೋಕಾರ್ಪಣೆ ಮಾಡಲು ಸಿದ್ಧತೆ ನಡೆದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ವಿಸ್ತರಣೆ ಸೇರಿದಂತೆ ನಗರದ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ಸಹಾದತ್ನಿಂದ್ ನಯಾ ಘಾಟ್ವರೆಗಿನ 13 ಕಿ.ಮೀ ಉದ್ದದ ರಾಮಪಥ ಕಾಮಗಾರಿ ಪ್ರಗತಿಯಲ್ಲಿದೆ. ರಾಮಜಾನಕಿ ಪಥ ಮತ್ತು ಭಕ್ತಿ ಪಥದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನೂ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ಈ ರಸ್ತೆ ಮತ್ತು ಕಾರಿಡಾರ್ಗಳು ಭಕ್ತರು ಶ್ರೀರಾಮ ಜನ್ಮಭೂಮಿ ಮತ್ತು ಹನುಮಾನ್ಗಡಿಗೆ ತಲುಪಲು ನೆರವಾಗುತ್ತವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನಿರಂತರವಾಗಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.