ಇಂಫಾಲ: ನನ್ನ ರಾಜ್ಯ ಮಣಿಪುರ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದ್ದು, ದಯವಿಟ್ಟು ಸಹಾಯ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.
ಇಂಫಾಲ: ನನ್ನ ರಾಜ್ಯ ಮಣಿಪುರ ಹಿಂಸಾಚಾರದಿಂದ ಹೊತ್ತಿ ಉರಿಯುತ್ತಿದ್ದು, ದಯವಿಟ್ಟು ಸಹಾಯ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.
ಈ ನಡುವೆ ಮಣಿಪುರ ಹಿಂಸಾಚಾರ ಕುರಿತು ಪ್ರತಿಕ್ರಿಯೆ ನೀಡಿರುವ ಮಣಿಪುರ ಸಿಎಂ ಬಿರೇನ್ ಸಿಂಗ್ ಅವರು, ಹಿಂಸಾಚಾರದಲ್ಲಿ "ಅಮೂಲ್ಯ ಜೀವಗಳು ಹೋಗಿವೆ. ಈ ಘಟನೆಯು "ಸಮಾಜದ ಎರಡು ವರ್ಗಗಳ ನಡುವಿನ ತಪ್ಪು ತಿಳುವಳಿಕೆಯ ಪರಿಣಾಮವಾಗಿದೆ" ಎಂದು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ, ಇಂಫಾಲ್, ಬಿಷ್ಣುಪುರ್ ಮತ್ತು ಮೋರೆ ಇತ್ಯಾದಿಗಳಲ್ಲಿ ಕೆಲವು ಘರ್ಷಣೆಗಳು, ವಿಧ್ವಂಸಕತೆ ಮತ್ತು ಬೆಂಕಿ ಹಚ್ಚುವ ಘಟನೆಗಳು ವರದಿಯಾಗಿವೆ. ಇದರಿಂದ ಆಸ್ತಿ-ಪಾಸ್ತಿ, ಮನೆಯ ಹಾನಿಯ ಜೊತೆಗೆ ಅಮೂಲ್ಯವಾದ ಜೀವಗಳು ಹೋಗಿವೆ, ಇದು ತುಂಬಾ ದುರದೃಷ್ಟಕರ ವಿಚಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.