HEALTH TIPS

ಸಿಖ್‌ ವಿರೋಧಿ ದಂಗೆ: ಜಗದೀಶ್‌ ಟೈಟ್ಲರ್‌ ವಿರುದ್ಧ ಸಿಬಿಐ ಚಾರ್ಚ್‌ಶೀಟ್‌ ಸಲ್ಲಿಕೆ

                ವದೆಹಲಿ1984ರಲ್ಲಿ ದೆಹಲಿಯ ಪುಲ್‌ ಬಂಗಾಶ್‌ನಲ್ಲಿ ನಡೆದ 'ಸಿಖ್‌ ವಿರೋಧಿ ದಂಗೆ' ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ತನಿಖಾ ದಳ (ಸಿಬಿಐ) ಕಾಂಗ್ರೆಸ್ ನಾಯಕ ಜನದೀಶ್‌ ಟೈಟ್ಲರ್‌ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಚ್‌ಶೀಟ್‌) ಸಲ್ಲಿಸಿದೆ.

            1984 ಅಕ್ಟೋಬರ್ 31ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆ ಮಾಡಲಾಗಿತ್ತು. ಹತ್ಯೆ ಬಳಿಕ ದೇಶದಲ್ಲಿ ಸಿಖ್‌ ವಿರೋಧಿ ದಂಗೆಗಳು ಭುಗಿಲೆದ್ದಿದ್ದವು. ಇಂದಿರಾ ಗಾಂಧಿ ಹತ್ಯೆಯಾದ ಮರುದಿನ(1984 ನವೆಂಬರ್‌ 1) ದೆಹಲಿಯ ಆಜಾದ್‌ ಮಾರ್ಕೆಟ್‌ ಬಳಿಯಿರುವ ಗುರುದ್ವಾರಕ್ಕೆ ಬೆಂಕಿ ಹಚ್ಚಲಾಗಿತ್ತು. ಸ್ಥಳದಲ್ಲಿದ್ದ ಸಿಖ್‌ ಸಮುದಾಯಕ್ಕೆ ಸೇರಿದ ಮೂವರಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಜಗದೀಶ್ ಟೈಟ್ಲರ್ ಪ್ರಮುಖ ಆರೋಪಿಯಾಗಿದ್ದಾರೆ.

                '1984 ರ ನವೆಂಬರ್ 1 ರಂದು ಆಜಾದ್ ಮಾರ್ಕೆಟ್‌ನ ಗುರುದ್ವಾರದ ಬಳಿ ನೆರೆದಿದ್ದ ಗುಂಪಿಗೆ ಜಗದೀಶ್‌ ಟೈಟ್ಲರ್ ಪ್ರಚೋದನೆ ನೀಡಿದ್ದರು. ಪ್ರಚೋದಿತ ಗುಂಪು ಗುರುದ್ವಾರಕ್ಕೆ ಬೆಂಕಿಯಿಟ್ಟು ಸುಟ್ಟು ಹಾಕಿತ್ತು. ಅಲ್ಲಿದ್ದ ಸಿಖ್‌ ಸಮುದಾಯಕ್ಕೆ ಸೇರಿದ್ದ ಠಾಕೂರ್ ಸಿಂಗ್, ಬಾದಲ್ ಸಿಂಗ್ ಮತ್ತು ಗುರು ಚರಣ್ ಸಿಂಗ್ ಅವರನ್ನು ಕೊಲ್ಲಲಾಯಿತು' ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

                  ಜಗದೀಶ್‌ ಟೈಟ್ಲರ್ ವಿರುದ್ಧ ಸಿಬಿಐ ಐಪಿಸಿ ಸೆಕ್ಷನ್‌ 302 (ಕೊಲೆ), 147 (ಗಲಭೆ), 109 (ಉತ್ತೇಜನ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                  ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್‌ 2ರಂದು ನ್ಯಾಯಾಲಯ ವಿಚಾರಣೆ ನಡೆಸಲಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries