HEALTH TIPS

ರೈತರ ರಕ್ತಹಿರುವ ಪಿಣರಾಯಿ ಸರ್ಕಾರ-ರೈತ ಮೊಚಾ ನೇತರ ಕೆ. ರಂಜಿತ್ ಟಿಕೆ


                       ಕಾಸರಗೋಡು: ಪಿಣರಾಯಿ ವಿಜಯನ್ ಅವರದ್ದು, ರೈತರ ರಕ್ತ ಹೀರುವ ಸರ್ಕಾರವಾಗಿ ಬದಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ರಂಜಿತ್ ತಿಳಿಸಿದ್ದರೆ. ಅವರು ರೈತ ಮೋರ್ಚಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನಾ ಧರಣಿ ಉದ್ಘಾಟಿಸಿ ಮಾತನಾಡಿದರು. 

               ಕಳೆದ ಏಳು ವರ್ಷಗಳ ಎಡರಂಗ ಆಳ್ವಿಕೆಯಲ್ಲಿ ಕೇರಳದ ರೈತರು ತೀವ್ರ ಸಂಕಷ್ಟ ಅನುಬವಿಸುವ ಸ್ಥಿತಿ ಬಂದೊದಗಿದೆ.  ರೈತರಿಂದ ಸಂಗ್ರಹಿಸುವ ಭತ್ತಕ್ಕೆ ಹನ ಪಾವತಿಸದೆ ತಿಂಗಳುಗಳೇ ಸಂದಿದೆ.  ರಬ್ಬರ್‍ಗೆ 250 ರೂ. ನಿಡುವ ಭರವಸೆಯೊಂದಿಗೆ ಚಪ್ಪಾಳೆ ಗಿಟ್ಟಿಸಿದ್ದ ಸರ್ಕಾರ ಇಂದು ಹಣ ನೀಡದೆ ಕೃಷಿಕರನ್ನು ವಂಚಿಸಿದೆ.  ಬೆಲೆ ಕುಸಿತದಿಂದ ತೆಂಗು ರೈತರು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿ ವೈಫಲ್ಯ ಕಮಡಿರುವ ಎಡರಂಗ ಸರ್ಕರ ಕಿಸಾನ್ ಸಮ್ಮಾನ್ ನಿಧಿ ಸೇರಿದಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಯೋಜನೆಗಳನ್ನು ಬುಡಮೇಲುಗೊಳಿಸಲು ಯತ್ನಿಸುತ್ತಿರುವುದಾಗಿ ದೂರಿದರು.

              ಕೃಷಿಕ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಳಾಲ್ ಕುಞÂರಾಮನ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ರವೀಂದ್ರ ಚಾಕುತ್,  ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ರೈ, ಕಾರ್ಯದರ್ಶಿಗಳಾದ ಎನ್. ಮಧು, ಮನುಲಾಲ್ ಮೇಲತ್,  ಕೋಶ ಸಂಯೋಜಕ ಎನ್. ಬಾಬುರಾಜಿ, ರಾಜ್ಯ ಸಮಿತಿ ಸದಸ್ಯೆ ಸವಿತಾ ಟೀಚರ್, ಕೌನ್ಸಿಲ್ ಸದಸ್ಯ ಶಿವಕೃಷ್ಣಭಟ್ಟಿ, ಬಿಜೆಪಿ ಕುಂಬಳೆ ಮಂಡಲ ಸಮಿತಿ ಅಧ್ಯಕ್ಷ ಸುನೀಲ್ ಕುಮಾರ್,  ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪುಷ್ಪಾ ಗೋಪಾಲನ್,  ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಮಯ್ಯ, ಅನಿಲ್ ಕುಮಾರ್,  ಜಯಕುಮಾರ್, ಸುಕುಮಾರನ್ ಕುದ್ರೆಪ್ಪಾಡಿ,  ನಾಗೇಶ್, ರೈತ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಜಯಪ್ರಕಾಶ್ ನಾಯ್ಕ್ ಉಪಸ್ಥಿತರಿದ್ದರು. ರೈತ ಮೋರ್ಚಾಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದು ಮಾಸ್ಟರ್ ಸ್ವಾಗತಿಸಿದರು. ಓ. ಜಯರಾಮ ಮಾಸ್ಟ್ ವಂದಿಸಿದರು.

                                    ಮನವಿ:

      ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ. 

    ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:

      ಗೂಗಲ್ ಪೇ: 7907952070

   ಬ್ಯಾಂಕ್ ವಿವರ: 

    ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.

 CANARA BANK
BADIYADKA BRANCH
A/c NUMBER: 0611101029775
IFSC: CNRB0004489


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries