ಎರ್ನಾಕುಳಂ: ಆಸ್ಪತ್ರೆ ರಕ್ಷಣೆಗೆ ಎಸ್ಐಎಸ್ಎಫ್ ಗಳನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಆಸ್ಪತ್ರೆ ಸಂರಕ್ಷಣಾ ಸುಗ್ರೀವಾಜ್ಞೆ ಜಾರಿಗೆ ಬಂದಿದೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಮೊದಲು ಎಸ್ಐಎಸ್ಎಫ್ ನಿಯೋಜಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ಯುವ ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣದ ವಿಚಾರಣೆ ವೇಳೆ ಸರ್ಕಾರ ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ಖಾಸಗಿ ಆಸ್ಪತ್ರೆಗಳು ಕೋರಿದರೆ ಎಸ್ ಐಎಸ್ ಎಫ್ ಭದ್ರತೆಯನ್ನೂ ನೀಡಬೇಕು ಮತ್ತು ಇದರ ವೆಚ್ಚವನ್ನು ಸರಕಾರವೇ ಭರಿಸಬಹುದೆಂದು ಹೈಕೋರ್ಟ್ ಹೇಳಿದೆ. ಏತನ್ಮಧ್ಯೆ, ವಂದನಾ ಕುಟುಂಬಕ್ಕೆ ಪರಿಹಾರವನ್ನು ಪರಿಗಣಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.
ಆರೋಪಿಯನ್ನು ಆಸ್ಪತ್ರೆಗೆ ಕರೆತರುವ ಕರಡು ಶಿμÁ್ಟಚಾರವನ್ನು ಸರ್ಕಾರವು ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ಅರ್ಜಿಯನ್ನು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಮತ್ತು ಕೌಸರ್ ಎಡಪ್ಪಗಟ್ ಅವರು ವಿಚಾರಣೆ ನಡೆಸಿದರು. ಮ್ಯಾಜಿಸ್ಟ್ರೇಟ್ ಮತ್ತು ವೈದ್ಯರಿಗೆ ಹಾಗೂ ಆರೋಪಿಗಳಿಗೆ ಭದ್ರತೆ ಒದಗಿಸಬೇಕು. ಇದನ್ನು ಸಹ ಪರಿಗಣನೆಗೆ ತೆಗೆದುಕೊಳ್ಳಬೇಕು ಮತ್ತು ಪೆÇ್ರೀಟೋವನ್ನು ಸಿದ್ಧಪಡಿಸಬೇಕು ಎಂದು ನ್ಯಾಯಾಲಯ ಬೊಟ್ಟುಮಾಡಿದೆ.