ನವದೆಹಲಿ: ಖಾಲಿಸ್ತಾನ ಬೆಂಬಲಿಗರ ನಿಗ್ರಹಕ್ಕೆ ಕ್ರಮ ಕೈಗೊಂಡ ಕಾರಣ ಸಂಭವನೀಯ ಅಪಾಯವನ್ನು ಅರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕೇಂದ್ರ ಸರ್ಕಾರವು ಝಡ್ ಪ್ಲಸ್ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ನವದೆಹಲಿ: ಖಾಲಿಸ್ತಾನ ಬೆಂಬಲಿಗರ ನಿಗ್ರಹಕ್ಕೆ ಕ್ರಮ ಕೈಗೊಂಡ ಕಾರಣ ಸಂಭವನೀಯ ಅಪಾಯವನ್ನು ಅರಿತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕೇಂದ್ರ ಸರ್ಕಾರವು ಝಡ್ ಪ್ಲಸ್ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಅತಿಗಣ್ಯರ ಕಾವಲು ದಳವು ಮಾನ್ಗೆ ಭದ್ರತೆ ನೀಡಲಿದೆ.
ಗುಪ್ತಚರ ಮಾಹಿತಿಯನ್ನು ಆಧರಿಸಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ಪುರಸ್ಕರಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರೂ ಆಗಿರುವ 49 ವರ್ಷದ ಮಾನ್ ಅವರಿಗೆ ದೇಶದಾದ್ಯಂತ ಝಡ್+ ಭದ್ರತೆ ಒದಗಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರತ್ಯೇಕ ಖಾಲಿಸ್ತಾನ ಪ್ರತಿಪಾದಕ ಅಮೃತ್ಪಾಲ್ ಸಿಂಗ್ನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಅದಾದ ನಂತರದ ಖಾಲಿಸ್ತಾನಿ ಚಟುವಟಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಗುಪ್ತಚರ ಇಲಾಖೆಯು ಮಾನ್ ಅವರಿಗೆ ಝಡ್+ ಭದ್ರತೆ ಒದಗಿಸುವಂತೆ ಶಿಫಾರಸು ಮಾಡಿತ್ತು ಎಂದೂ ತಿಳಿಸಿದ್ದಾರೆ.
55 ಮಂದಿ ಶಸ್ತ್ರಸಜ್ಜಿತ ಸಿಬ್ಬಂದಿಯ ತಂಡ ಶೀಘ್ರವೇ ಭದ್ರತೆಯ ಹೊಣೆ ವಹಿಸಿಕೊಳ್ಳಲಿದೆ. ಮಾನ್ ಅವರ ಅಧಿಕೃತ ನಿವಾಸ ಹಾಗೂ ಕುಟುಂಬಕ್ಕೂ ಭದ್ರತೆ ನೀಡಲಾಗುತ್ತದೆ.
ಮನವಿ:ಸನ್ಮನಸ್ಸಿನ ಓದುವರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ.
ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:
ಗೂಗಲ್ ಪೇ: 7907952070
ಬ್ಯಾಂಕ್ ವಿವರ:
ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.