HEALTH TIPS

ಶ್ರೀಕೃಷ್ಣ ಜನ್ಮಭೂಮಿ ವಿವಾದ: ಹೈಕೋರ್ಟ್‌ಗೆ ಎಲ್ಲ ಅರ್ಜಿಗಳ ವರ್ಗಾವಣೆಗೆ ಆದೇಶ

                 ಖನೌ: ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿ ಮಥುರಾ ನ್ಯಾಯಾಲಯದ ಮುಂದಿರುವ ಎಲ್ಲ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಅಲಹಾಬಾದ್‌ ಹೈಕೋರ್ಟ್‌ ಶುಕ್ರವಾರ ಮಹತ್ವದ ಆದೇಶ ನೀಡಿದೆ.

                ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಮಿಶ್ರಾ ಅವರು ಈ ಆದೇಶ ನೀಡಿದ್ದಾರೆ.

              ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ನಡೆಸಬೇಕು ಎಂದು ಭಗವಾನ್‌ ಶ್ರೀಕೃಷ್ಣ ವಿರಾಜ್‌ಮಾನ್‌ ಮತ್ತು ಇತರ ಏಳು ಮಂದಿ ಅಲಹಾಬಾದ್‌ ಹೈಕೋರ್ಟ್‌ ಅನ್ನು ಕೋರಿದ್ದರು. ಈ ಕುರಿತು ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿತ್ತು.

            'ಇದು ಹಿಂದೂಗಳು ಹಾಗೂ ಮುಸ್ಲಿಮರ ನಂಬಿಕೆ ವಿಷಯವಾಗಿದೆ. ಆದ್ದರಿಂದ ಕೆಳಹಂತದ ನ್ಯಾಯಾಲಯದಲ್ಲಿಯೇ ಈ ಅರ್ಜಿಗಳ ವಿಚಾರಣೆ ಮುಂದುವರೆದರೆ ಪ್ರಕರಣದ ಇತ್ಯರ್ಥ ತಡವಾಗಬಹುದು' ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ.

               ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸುವಂತೆ ಮಥುರಾದ ಜಿಲ್ಲಾ ನ್ಯಾಯಾಧೀಶರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಮಥುರಾ ನ್ಯಾಯಾಲಯದಲ್ಲಿ ಒಟ್ಟು ಏಳು ಅರ್ಜಿಗಳು ವಿಚಾರಣಾ ಹಂತದಲ್ಲಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries