HEALTH TIPS

ದೆಹಲಿ | ಸುಪ್ರೀಂ ಕೋರ್ಟ್‌ ಆದೇಶಕ್ಕೆ ಅನುಗುಣವಾಗಿ ಸುಗ್ರೀವಾಜ್ಞೆ: ಬಿಜೆಪಿ

                  ವದೆಹಲಿ: ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವುದನ್ನು ಬಿಜೆಪಿ ಶನಿವಾರ ಸಮರ್ಥಿಸಿಕೊಂಡಿದೆ.

               'ಈ ಸುಗ್ರೀವಾಜ್ಞೆಯು, ದೆಹಲಿಯ ಸೇವಾ ವಿಷಯಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ ವ್ಯಕ್ತಪಡಿಸಿರುವ ಅಭಿಪ್ರಾಯಗಳು ಹಾಗೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿಯೇ ಇದೆ.

ದೆಹಲಿಯ ಸಾಮಾನ್ಯ ಪ್ರಜೆಯ ಹಿತದೃಷ್ಟಿಯಿಂದಲೂ ಇಂಥ ಕ್ರಮ ತೆಗೆದುಕೊಳ್ಳಲಾಗಿದೆ' ಎಂದು ಬಿಜೆಪಿ ವಕ್ತಾರ ಗೌರವ ಭಾಟಿಯಾ ಸುದ್ದಿಗೋಷ್ಠಿಯಲ್ಲಿ ಹೇಳಿದರು.

             'ದೆಹಲಿಯು ಕೇಂದ್ರಾಡಳಿತ ಪ್ರದೇಶ. ಇದರ ಆಡಳಿತಕ್ಕೆ ಸಂಬಂಧಿಸಿ ಸಂವಿಧಾನದ 239ಎಎ ವಿಧಿಯಡಿ ಸಂಸತ್‌ಗೆ ಅಧಿಕಾರ ನೀಡಲಾಗಿದೆ. ದೆಹಲಿ ಎಂಬುದು 'ಅರವಿಂದ ಕೇಜ್ರಿವಾಲ್‌ ಪ್ರದೇಶ'ವಲ್ಲ. ಇಲ್ಲಿ ಸಂವಿಧಾನದ ಪ್ರಕಾರವೇ ಆಡಳಿತ ನಡೆಯುತ್ತದೆ. ನಿಮ್ಮ ಮನಸ್ಸಿಗೆ ತೋಚಿದಂತೆ ಅಲ್ಲ' ಎಂದು ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ನಡೆಸಿದರು.

                 'ಸುಪ್ರೀಂಕೋರ್ಟ್‌ಗೆ ಬೇಸಿಗೆ ರಜೆ ಆರಂಭವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ತಂದಿದೆ' ಎಂಬ ಆಮ್‌ ಆದ್ಮಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿದ ಭಾಟಿಯಾ, 'ಮೇಲ್ಮನವಿ ಸಲ್ಲಿಸಲು ರಜಾಕಾಲದ ನ್ಯಾಯಪೀಠ ಇದ್ದೇ ಇದೆ' ಎಂದರು.

               'ಸುಗ್ರೀವಾಜ್ಞೆಯ ಕಾನೂನಾತ್ಮಕ ಮತ್ತು ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ದೆಹಲಿ ಸರ್ಕಾರ ಸೋಮವಾರವೇ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಿ' ಎಂದು ಅವರು ಸವಾಲು ಹಾಕಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries