ಹೈದರಾಬಾದ್: ಕೋರೊಮಂಡಲ್ ಎಕ್ಸ್ಪ್ರೆಸ್ ರೈಲಿನಲ್ಲಿ ಶುಕ್ರವಾರ ರಾತ್ರಿ ಪ್ರಯಾಣಿಸುತ್ತಿದ್ದ ರಾಜ್ಯದ 113 ಮಂದಿ ಪ್ರಯಾಣಿಕರು ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಅವರನ್ನು ಪತ್ತೆ ಮಾಡಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಆಂಧ್ರ ಪ್ರದೇಶ ಸರ್ಕಾರ ತಿಳಿಸಿದೆ.
ಹೈದರಾಬಾದ್: ಕೋರೊಮಂಡಲ್ ಎಕ್ಸ್ಪ್ರೆಸ್ ರೈಲಿನಲ್ಲಿ ಶುಕ್ರವಾರ ರಾತ್ರಿ ಪ್ರಯಾಣಿಸುತ್ತಿದ್ದ ರಾಜ್ಯದ 113 ಮಂದಿ ಪ್ರಯಾಣಿಕರು ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಅವರನ್ನು ಪತ್ತೆ ಮಾಡಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ ಎಂದು ಆಂಧ್ರ ಪ್ರದೇಶ ಸರ್ಕಾರ ತಿಳಿಸಿದೆ.
'ಒಟ್ಟು 482 ಪ್ರಯಾಣಿಕರು ರಾಜ್ಯಕ್ಕೆ ಸೇರಿದವರು ಅಥವಾ ರಾಜ್ಯಕ್ಕೆ ಪ್ರಯಾಣಿಸುತ್ತಿದ್ದರು. ಅವರಲ್ಲಿ 267 ಜನ ಸುರಕ್ಷಿತವಾಗಿದ್ದು, 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನು 82 ಪ್ರಯಾಣಿಕರು ತಮ್ಮ ಪ್ರಯಾಣವನ್ನು ರದ್ದುಪಡಿಸಿದ್ದರು. ಆದರೆ ಇನ್ನೂ 113 ಪ್ರಯಾಣಿಕರ ಮೊಬೈಲ್ ಫೋನ್ಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರಿರುವ ಜಾಗ ಮತ್ತು ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ' ಎಂದು ರಾಜ್ಯದ ಶಿಕ್ಷಣ ಸಚಿವ ಬೊತ್ಸಾ ಸತ್ಯನಾರಾಯಣ ಅವರು ಶನಿವಾರ ನಡೆದ ಪರಿಶೀಲನಾ ಸಭೆ ಬಳಿಕ ಹೇಳಿದ್ದಾರೆ.