HEALTH TIPS

ಕೊಂಡೆವೂರು ಶ್ರೀಗಳ 20 ನೇ ಚಾತುರ್ಮಾಸ್ಯ ವ್ರತಾಚರಣೆ ಜು.3 ರಿಂದ

          ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20ನೇ ಚಾತುರ್ಮಾಸ್ಯ ವ್ರತಸಂಕಲ್ಪ ಗುರುಪೂರ್ಣಿಮೆ ದಿನವಾದ ಜು.03 ರಂದು ಸೋಮವಾರ ಕೊಂಡೆವೂರು ಶ್ರೀಮಠದಲ್ಲಿ ಕೈಗೊಳ್ಳಲಿದ್ದಾರೆ. ಆ ದಿನ ಬೆಳಿಗ್ಗೆ 8.30ಕ್ಕೆ ಗಣಹೋಮ, 9.30ಕ್ಕೆ ಶ್ರೀ ನಿತ್ಯಾನಂದ ಗುರುದೇವರಿಗೆ ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, 10.30ಕ್ಕೆ ವ್ಯಾಸಪೂಜೆ ಆರಂಭವಾಗಿ 12.ಕ್ಕೆ ಮಂಗಳಾರತಿ, 12.30ಕ್ಕೆ ಮಹಾಪೂಜೆ ನಂತರ ಅನ್ನಪ್ರಸಾದ ನಡೆಯಲಿದೆ. ಸಂಜೆ 7.ಕ್ಕೆ “ಶ್ರೀ ಗುರುಪಾದುಕಾ ಪೂಜೆ”, ಭಜನೆ ನಂತರ ಶ್ರೀಗಳಿಂದ ”ಸತ್ಸಂಗ” ನಡೆದು ಅನುಗ್ರಹ ಮಂತ್ರಾಕ್ಷತೆ ನೀಡಲಿದ್ದಾರೆ. 

       ಸೆ. 29 ಶುಕ್ರವಾರದಂದು ಸಂಪನ್ನಗೊಳ್ಳಲಿರುವ ಚಾತುರ್ಮಾಸ್ಯದ ಈ ಸತ್ಸಂದರ್ಭದಲ್ಲಿ ವಿವಿಧ ಹೋಮ ಹವನಗಳು, ಧಾರ್ಮಿಕ ಕಾರ್ಯಕ್ರಮಗಳು ಪ್ರತಿನಿತ್ಯ ನಡೆಯಲಿವೆ. ಪ್ರತೀದಿನ ಸಂಜೆ 5.30ರಿಂದ 7. ರ ವರೆಗೆ ವಿವಿಧ ಭಜನಾತಂಡಗಳಿಂದ ಭಜನಾಸೇವೆ ನಡೆಯಲಿದೆ. ಪ್ರತೀ ಭಾನುವಾರ ಸಂಜೆ 3. ರಿಂದ 5. ರವರೆಗೆ ಸಾಮೂಹಿಕ ವಿಷ್ಣುಸಹಸ್ರನಾಮ ಪಾರಾಯಣ, ಭಜನೆ ಹಾಗೂ ಸತ್ಸಂಗಗಳನ್ನು (ವಿವಿಧ ವಿದ್ವಾಂಸರ ಧಾರ್ಮಿಕ ಪ್ರವಚನಗಳು)ಆಯೋಜಿಸಿದೆ. ಚಾತುರ್ಮಾಸ್ಯದ ಸಂದರ್ಭ ಭಕ್ತಾದಿಗಳು ಶ್ರೀಮಠಕ್ಕೆ ಆಗಮಿಸಿ, ಶ್ರೀಗುರು ಕೃಪಾಶೀರ್ವಾದ ಪಡೆದು ಅನುಗ್ರಹೀತರಾಗಬೇಕಾಗಿ ಕೊಂಡೆವೂರು ಮಠದ ಪ್ರಕಟಣೆಯಲ್ಲಿ  ವಿನಂತಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries