HEALTH TIPS

ಆರ್‌ಬಿಐ ನಿರ್ಧಾರ ಪ್ರಶ್ನಿಸಿ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

                            ವದೆಹಲಿ (PTI): ಯಾವುದೇ ಅರ್ಜಿ ಹಾಗೂ ಗುರುತಿನ ಚೀಟಿ ಇಲ್ಲದೆಯೇ ₹ 2 ಸಾವಿರ ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿ ಆರ್‌ಬಿಐ ತೆಗೆದುಕೊಂಡ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ತುರ್ತು ವಿಚಾರಣೆ ನಡೆಸುವುದಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ನಿರಾಕರಿಸಿತು.

              ಈ ವಿಚಾರವಾಗಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ಪಟ್ಟಿಗೆ ಸೇರಿಸುವುದಕ್ಕೆ ಸಂಬಂಧಿಸಿ ರಿಜಿಸ್ಟ್ರಿ ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿದ ನಂತರ ಸುಪ್ರೀಂಕೋರ್ಟ್‌ ಈ ವಿಷಯ ಸ್ಪಷ್ಟಪಡಿಸಿತು.

                   ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಹಾಗೂ ರಾಜೇಶ್ ಬಿಂದಲ್‌ ಅವರಿದ್ದ ರಜಾಕಾಲದ ನ್ಯಾಯಪೀಠ, ಬೇಸಿಗೆ ರಜೆ ಮುಗಿದ ನಂತರ, ಈ ವಿಷಯವನ್ನು ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರಲ್ಲಿ ಮಂಡಿಸುವಂತೆ ಸೂಚನೆ ನೀಡಿತು.

ಅರ್ಜಿಯ ತುರ್ತು ವಿಚಾರಣೆ ನಡೆಸುವಂತೆ ಅರ್ಜಿದಾರರೂ ಆದ ವಕೀಲ ಅಶ್ವಿನಿ ಉಪಾಧ್ಯಾಯ ಮನವಿ ಸಲ್ಲಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries