HEALTH TIPS

ಗುಜರಾತ್‌ ನಂತರ ಈಗ ರಾಜಸ್ಥಾನದ ಕಡೆಗೆ ಚಂಡಮಾರುತ ಬಿಪೊರ್‌ಜಾಯ್‌!

                  ಜೈಪುರ: ಗುಜರಾತ್‌ಗೆ ಅಪ್ಪಳಿಸಿ, ಅಬ್ಬರಿಸುತ್ತಿರುವ ಬಿಪೊರ್‌ಜಾಯ್‌ ಚಂಡಮಾರುತ ಈಗ ರಾಜಸ್ಥಾನದ ಕಡೆ ಮುಖ ಮಾಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಬಾರ್ಮೆರ್‌, ಜಾಲೋರ್, ಜೈಸಲ್ಮೇರ್, ಸಿರೋಹಿ, ಜೋಧ್‌ಪುರ, ಪಾಲಿ ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಣೆ ಮಾಡಿದೆ.

                 ಪ್ರಬಲ ಚಂಡಮಾರುತವಾಗಿ ಗುಜರಾತ್‌ಗೆ ಅಪ್ಪಳಿಸಿದ್ದ ಬಿಪೊರ್‌ಜಾಯ್‌ ಕ್ರಮೇಣ ದುರ್ಬಲಗೊಂಡು ಸೌರಾಷ್ಟ್ರ ಮತ್ತು ಕಛ್‌ ಮೂಲಕ ಶುಕ್ರವಾರ ಸಂಜೆ ದಕ್ಷಿಣ ರಾಜಸ್ಥಾನ ಪ್ರವೇಶಿಸಲಿದೆ ಎಂದು ಐಎಂಡಿ ತಿಳಿಸಿದೆ.

                ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಜೋಧ್‌ಪುರ ವಿಶ್ವವಿದ್ಯಾಲಯವು ಶುಕ್ರವಾರ ಮತ್ತು ಶನಿವಾರದಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿದೆ.

ಬಾರ್ಮೆರ್-ಜೋಧ್‌ಪುರ ನಡುವೆ ಸಂಚರಿಸಬೇಕಿದ್ದ ಪ್ಯಾಸೆಂಜರ್ ರೈಲುಗಳನ್ನು ಎರಡು ದಿನ ರದ್ದು ಮಾಡಲಾಗಿದೆ.

                    ಬಾರ್ಮೆರ್ ಮತ್ತು ಜಾಲೋರ್‌ನಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗೆ ಬೇರೆಡೆ ತೆರಳುವಂತೆ ಸೂಚನೆ ನೀಡಲಾಗಿದೆ.

              ಜೈಸಲ್ಮೇರ್‌ನ ಡಬ್ಲಾ ಗ್ರಾಮದಿಂದ 450 ಜನರನ್ನು ಸ್ಥಳಾಂತರಿಸಲಾಗಿದೆ. ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ, ನರೇಗಾ ಕಾಮಗಾರಿಗಳನ್ನು ನಿಲ್ಲಿಸಲಾಗಿದೆ.

                ಬಾರ್ಮೆರ್, ಜಲೋರ್, ಜೈಸಲ್ಮೇರ್‌ನಲ್ಲಿ ಗುರುವಾರ ಮಧ್ಯಾಹ್ನ ಬಲವಾದ ಗಾಳಿ ಬೀಸುತ್ತಿದ್ದು, ಹಲವೆಡೆ ಸಾಧಾರಣ ಮಳೆಯಾಗಿದೆ. ಬಾರ್ಮೆರ್‌ನ ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಸಂಜೆಯವರೆಗೆ 20 ಮಿ.ಮೀ ಮಳೆ ದಾಖಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries