HEALTH TIPS

ಭದ್ರತಾ ಮಂಡಳಿ: ಭಾರತಕ್ಕೆ ಕಾಯಂ ಸದಸ್ಯತ್ವಕ್ಕೆ ರಾಜನಾಥ್‌ ಸಿಂಗ್‌ ಆಗ್ರಹ

               ವದೆಹಲಿ: ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯ ಸ್ಥಾನ ನೀಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಂಗಳವಾರ ಹೇಳಿದರು.

                 ವಿಶ್ವಸಂಸ್ಥೆಯ ಶಾಂತಿಪಾಲನೆ ಕಾರ್ಯಕ್ರಮಕ್ಕೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

               'ಭಾರತಕ್ಕೆ ಕಾಯಂ ಸದಸ್ಯತ್ವ ನೀಡುವ ಮೂಲಕ ಭದ್ರತಾ ಮಂಡಳಿಯನ್ನು ಹೆಚ್ಚು ಪ್ರಜಾಸತ್ತಾತ್ಮಕ ಹಾಗೂ ಪ್ರಸ್ತುತ ದಿನಮಾನಕ್ಕೆ ತಕ್ಕಂತೆ ಪ್ರಾತಿನಿಧಿಕ ಸಂಸ್ಥೆಯನ್ನಾಗಿ ಮಾಡುವ ಅಗತ್ಯವಿದೆ' ಎಂದು ಅವರು ಪ್ರತಿಪಾದಿಸಿದರು.

               'ಭಾರತದ ಜನಸಂಖ್ಯೆ ದೊಡ್ಡಪ್ರಮಾಣದಲ್ಲಿದ್ದರೂ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಹೊಂದಿಲ್ಲ. ಇದು ವಿಶ್ವಸಂಸ್ಥೆಯ ಔಚಿತ್ಯವನ್ನೇ ಕುಗ್ಗುವಂತೆ ಮಾಡುತ್ತದೆ' ಎಂದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries