ಲಖನೌ: 'ಜಾಗತಿಕ ವಿದ್ಯಮಾನಗಳು ತೀವ್ರಗತಿಯಲ್ಲಿ ಬದಲಾಗುತ್ತಿರುವ ಈಗಿನ ಹೊತ್ತಿನಲ್ಲಿ ಸ್ವಾವಲಂಬನೆ ಎಂಬುದು ಆಯ್ಕೆಯಷ್ಟೇ ಅಲ್ಲ, ಅನಿವಾರ್ಯ ಅಗತ್ಯ' ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅಭಿಪ್ರಾಯಪಟ್ಟರು.
0
samarasasudhi
ಜೂನ್ 17, 2023
ಲಖನೌ: 'ಜಾಗತಿಕ ವಿದ್ಯಮಾನಗಳು ತೀವ್ರಗತಿಯಲ್ಲಿ ಬದಲಾಗುತ್ತಿರುವ ಈಗಿನ ಹೊತ್ತಿನಲ್ಲಿ ಸ್ವಾವಲಂಬನೆ ಎಂಬುದು ಆಯ್ಕೆಯಷ್ಟೇ ಅಲ್ಲ, ಅನಿವಾರ್ಯ ಅಗತ್ಯ' ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅಭಿಪ್ರಾಯಪಟ್ಟರು.
'1971ರ ಯುದ್ಧದ ಸಂದರ್ಭದಲ್ಲಿ ನಮಗೆ ಹೆಚ್ಚಿನ ಶಸ್ತ್ರಾಸ್ತ್ರಗಳ ಅಗತ್ಯವಿತ್ತು.
1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿಯೂ ನಾವು ಇಂತಹುದೇ ಸ್ಥಿತಿಯನ್ನು ಎದುರಿಸಿದೆವು. ನಮಗೆ ಶಾಂತಿಯ ಮಂತ್ರ ಬೋಧಿಸುವ, ಸಾಮಾನ್ಯವಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ರಾಷ್ಟ್ರಗಳೂ ಪೂರೈಕೆಗೆ ನಿರಾಕರಿಸಿದ್ದವು ಎಂದು ತಿಳಿಸಿದರು.
ಆ ನಂತರ ನಮ್ಮ ಸಾಮರ್ಥ್ಯ ಬಲಪಡಿಸುವುದಕ್ಕಿಂತಲೂ ಬೇರೆ ಆಯ್ಕೆಗಳು ಇರಲಿಲ್ಲ. ಈಗ ದೇಶ ಸ್ವಾವಲಂಬನೆಯ ಹಾದಿಯಲ್ಲಿದೆ. ಭೂಮಿಯಿಂದ ಆಗಸದವರೆಗೆ, ಕೃಷಿ ಪರಿಕರಗಳಿಂದ ಕ್ರಯೋಜನಿಕ್ ಎಂಜಿನ್ವರೆಗೂ ನಾವೀಗ ಸ್ವಾವಲಂಬನೆಯ ಹಾದಿಯಲ್ಲಿದ್ದೇವೆ ಎಂದು ತಿಳಿಸಿದರು.
ಬದಲಾಗುತ್ತಿರುವ ಜಗತ್ತಿನಲ್ಲಿ ಸ್ವಾವಲಂಬನೆ ಎಂಬುದು ಅನಿವಾರ್ಯವಾಗಿದೆ. ದೇಶದ ಭದ್ರತೆಗೆ ನೇರವಾಗಿ ಸಂಬಂಧವಿರುವ ರಕ್ಷಣಾ ವಲಯದಲ್ಲಿ ಇದು ಅಗತ್ಯವೂ ಆಗಿದೆ ಎಂದು ಹೇಳಿದರು. 'ಆತ್ಮನಿರ್ಭರ ಭಾರತ್' ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.