HEALTH TIPS

ಕುಳೂರು ಶಾಲೆಯಲ್ಲಿ ಶಾಲಾ ವ್ಯವಸ್ಥಾಪಕ ಸಮಿತಿಯ ಮಹಾಸಭೆ: ನೂತನ ಸಮಿತಿ ರೂಪೀಕರಣ

                ಮಂಜೇಶ್ವರ : ಕುಳೂರಿನ ಸÀರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24 ನೇ ಸಾಲಿನ ಶಾಲಾ ವ್ಯವಸ್ಥಾಪಕ ಸಮಿತಿ ರೂಪೀಕರಣ ಮಹಾಸಭೆ ನಡೆಯಿತು. 

     ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷ ಸತೀಶ್ ಎಲಿಯಾಣ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಉಪಾಧ್ಯಕ್ಷ ಯೋಗೀಶ್ ಶೆಟ್ಟಿ ಪೊಯ್ಯೇಲು, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತ ಕುಳೂರು, ಉಪಾಧ್ಯಕ್ಷೆ ಮೀನಾಕ್ಷಿ ಬೊಡ್ಡೋಡಿ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು.

     ಕಳೆದ ಶೈಕ್ಷಣಿಕ ವರ್ಷದ ವಾರ್ಷಿಕ ವರದಿಯನ್ನು ಶಿಕ್ಷಕಿ ಅಶ್ವಿನಿ ಎಂ. ವಾಚಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಲೆಕ್ಕಪತ್ರ ಮಂಡಿಸಿದರು. ಶಾಲಾ ಚಟುವಟಿಕೆಗಳ ಬಗ್ಗೆ ಅವಲೋಕನ ನಡೆಸಲಾಯಿತು. ಶತಮಾನೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

        ಬಳಿಕ 2023-24 ನೇ ಸಾಲಿನ ನೂತನ ಶಾಲಾ ವ್ಯವಸ್ಥಾಪಕ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸತೀಶ್ ಎಲಿಯಾಣ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ ಸುಧಾಕರ್ ಶೆಟ್ಟಿ ಎಲಿಯಾಣ ಅವಿರೋಧವಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಜಯರಾಜ್ ಶೆಟ್ಟಿ ಚಾರ್ಲ, ಯೋಗೀಶ್ ಶೆಟ್ಟಿ ಪೊಯ್ಯೆಲು, ವಿಶ್ವನಾಥ ಸುಣ್ಣಾರ, ಭುಜಂಗ ಮೂಲ್ಯ ಎಲಿಯಾಣ, ಪ್ರತಿಭಾ ನಾಯಕ್ ಕುಳಬೈಲು, ಸುಹಾಸಿನಿ ಕುಳೂರು, ಉಷಾ ಆದರ್ಶ ನಗರ, ದಿವ್ಯ ಶಾಲೆದಪಡ್ಪು, ರೇಷ್ಮ ಕುಳೂರು, ಮೋಹಿನಿ ಕರಿಪ್ಪಾರ್, ಶಿಕ್ಷಣ ತಜ್ಞರಾಗಿ ಮೀನಾಕ್ಷಿ ಬೊಡ್ಡೋಡಿ ಆಯ್ಕೆಯಾದರು. 

             ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಸುಚರಿತ ಚಿನಾಲ, ಉಪಾಧ್ಯಕ್ಷೆಯಾಗಿ ಸುನಿತಾ ಕುಳೂರು ಅವಿರೋಧವಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ವೇದಾವತಿ ಸಂತಡ್ಕ, ಭಾರತಿ, ಶಾರದ ಕುಳೂರು, ಪ್ರಮೀಳ ಕುಳೂರು, ಸುಶೀಲ ಕೇಮಜಲ್, ಸಂಧ್ಯಾ ಕುಳೂರು, ವಿನೋದ ಸುಣ್ಣಾರ, ಪುಷ್ಪ, ನೆಫೀಸ ಕೊಜಮುಕು ಆಯ್ಕೆಯಾದರು. ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾಗಿ ಚೈತ್ರ ಕಲ್ಕಾರ್ ಆಯ್ಕೆಯಾದರು. ನೂತನ ಸಮಿತಿಯ ಪದಗ್ರಹಣ ನಡೆಯಿತು.

              ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕಿ ಶ್ವೇತ ಕುಳೂರು ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries