HEALTH TIPS

ಮಣಿಪುರ ಹಿಂಸಾಚಾರ: ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿ ಸಜೀವ ದಹನ

                 ಇಂಫಾಲ್‌: ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿದೆ ಎಂಬುದು ಬಹಿರಂಗವಾಗಿದೆ.  ಈ ಬಗ್ಗೆ ಸೆರೌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                ಇಂಫಾಲ್‌ನಿಂದ ಸುಮಾರು 45 ಕಿಮೀ ದೂರದಲ್ಲಿರುವ ಸೆರೌ ಗ್ರಾಮದಲ್ಲಿ ಮೇ 28ರಂದು ಈ ಘಟನೆ ನಡೆದಿದೆ.

              80 ವರ್ಷದ ಇಬೆತೊಂಬಿ ಮನೆಯೊಳಗೆ ಇದ್ದಾಗ ದಾಳಿಕೋರರು ಹೊರಗಿನಿಂದ ಬೀಗ ಹಾಕಿದ್ದರು. ಆನಂತರ ಮನೆಗೆ ಬೆಂಕಿ ಹಚ್ಚಲಾಗಿದೆ, ಕುಟುಂಬದವರು ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದೆ. ನಂತರ ಇಬೆಟೊಂಬಿಯು ಸಜೀವವಾಗಿ ಸುಟ್ಟು ಕರಕಲಾಗಿದ್ದರು ಎಂದು ಅವರು ಕುಟುಂಬದವರು ಹೇಳಿದ್ದಾರೆ.

                      ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries