HEALTH TIPS

ಅವಿವಾಹಿತರಿಗೆ ಪಿಂಚಣಿ ನೀಡುವುದಾಗಿ ಹೇಳಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್!

              ಚಂಡೀಗಢ: ಅವಿವಾಹಿತರಿಗೆ ಪಿಂಚಣಿ ನೀಡುವ ಯೋಜನೆಯನ್ನು ಜಾರಿಗೆ ತರುವುದಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.

                   ಸೋಮವಾರ ಕರ್ನಾಲ್ ಜಿಲ್ಲೆಯ ಕಲಂಪುರ್‌ದಲ್ಲಿ ನಡೆದ ಜನ ಸಂವಾದ ಕಾರ್ಯಕ್ರಮದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ.

                   45 ರಿಂದ 60 ವರ್ಷದೊಳಗಿನ ಅವಿವಾಹಿತರಿಗೆ ರಾಜ್ಯ ಸರ್ಕಾರದಿಂದ ಪಿಂಚಣಿ ಕೊಡುವ ಬಗ್ಗೆ ಚರ್ಚಿಸಲಾಗಿದೆ.

                    ಇನ್ನೊಂದು ತಿಂಗಳಲ್ಲಿ ಈ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಖಟ್ಟರ್ ಹೇಳಿದ್ದಾರೆ.

                ಹರಿಯಾಣದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸಂಸ್ಕೃತಿ ಮಾದರಿ ಶಾಲೆ, ಪ್ರತಿ ಗ್ರಾಮಕ್ಕೂ ವೇಗದ ಇಂಟರ್‌ನೆಟ್ ಒದಗಿಸುವ ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

                    ಸದ್ಯ ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದೆ. ವಿಶೇಷವೆಂದರೆ ಸಿಎಂ ಮನೋಹರ್ ಲಾಲ್ ಖಟ್ಟರ್ ಕೂಡ ಅವಿವಾಹಿತರಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries