HEALTH TIPS

ಅಪಹಾಸ್ಯ ತೀವ್ರ: ತಲೆ ತಗ್ಗಿಸುವ ವರ್ತನೆ ಬೇಡವೆಂದು ಪೋಲೀಸರಿಗೆ ಮುಖ್ಯಮಂತ್ರಿ ಸೂಚನೆ: ತಜ್ಞರ ಪರೀಕ್ಷೆ

                  ತಿರುವನಂತಪುರಂ: ಕೆಪಿಸಿಸಿ ನೇತೃತ್ವದಲ್ಲಿ ಆಯೋಜಿಸಿದ್ದ ಉಮ್ಮನ್‍ಚಾಂಡಿ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಮಾತನಾಡುವಾಗ ಮೈಕ್ ಆಫ್ ಆದ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಧ್ಯಪ್ರವೇಶಿಸಿದ್ದಾರೆ.

                ತರಾತುರಿಯಲ್ಲಿ ಪೋಲೀಸರು ಪ್ರಕರಣ ದಾಖಲಿಸಿರುವುದರ ವಿರುದ್ಧ ತೀವ್ರ ಟೀಕೆ ವ್ಯಕ್ತವಾದ ಸಂದರ್ಭದಲ್ಲೇ ಮುನ್ನಡೆ ಸಾಧಿಸುವ ಪ್ರಯತ್ನ ನಡೆದಿದೆ. ಭದ್ರತಾ ತಪಾಸಣೆ ಹೊರತುಪಡಿಸಿ ಯಾವುದೇ ಕ್ರಮ ಕೈಗೊಳ್ಳದಂತೆ ಮುಖ್ಯಮಂತ್ರಿ ಪೋಲೀಸರಿಗೆ ಸೂಚನೆ ನೀಡಿದ್ದಾರೆ.

                ಕೆಪಿಸಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾತನಾಡುತ್ತಿದ್ದ ವೇಳೆ ಮೈಕ್‍ಗೆ ಅಡ್ಡಿಪಡಿಸಿದ್ದಕ್ಕಾಗಿ ಕಂಟೋನ್ಮೆಂಟ್ ಪೋಲೀಸರು ವಿಚಿತ್ರ ಅಪರಾಧದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯಲ್ಲಿ ಯಾರೊಬ್ಬರೂ ದೂರು ದಾಖಲಿಸಿಲ್ಲ, ಪೋಲೀಸರು ಸ್ವಯಂ ಪ್ರಕರಣ ದಾಖಲಿಸಿದ್ದಾರೆ.ಆರೋಪಿಗಳು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುವಂತೆ ವರ್ತಿಸಿದ್ದಾರೆ ಎಂದು ಎಫ್‍ಐಆರ್‍ನಲ್ಲಿ ಹೇಳಲಾಗಿದೆ. ಆದರೆ ಎಫ್‍ಐಆರ್‍ನಲ್ಲಿ ಆರೋಪಿಯನ್ನು ಉಲ್ಲೇಖಿಸಿಲ್ಲ.

             ಘಟನೆಯಲ್ಲಿ ಮೈಕ್, ಆಂಪ್ಲಿಫೈಯರ್ ಮತ್ತು ತಂತಿಯನ್ನು ಪೋಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಎಲೆಕ್ಟ್ರಿಕಲ್ ಇನ್ಸ್‍ಪೆಕ್ಟರೇಟ್ ಇಂದು ಪರಿಶೀಲಿಸಲಿದ್ದಾರೆ ಎಂದು ಎಫ್‍ಐಆರ್‍ನಲ್ಲಿ ಹೇಳಲಾಗಿದೆ. ಈ ಹಿಂದೆ ಮುಖ್ಯಮಂತ್ರಿಗಳು ಮಾತನಾಡಿದ ಬೇರೆ ಕಾರ್ಯಕ್ರಮಗಳಲ್ಲೂ ಮೈಕ್ ಬ್ಲಾಕ್ ಮಾಡಲಾಗಿತ್ತು. ಆದರೆ ಸಾರ್ವಜನಿಕರ ಸುರಕ್ಷತೆಯನ್ನು ಮುಂದಿಟ್ಟುಕೊಂಡು ಯಾರೂ ಪ್ರಕರಣ ದಾಖಲಿಸಿಲ್ಲ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries