HEALTH TIPS

ತಮಿಳುನಾಡು: ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ, ಪುತ್ರ ಗೌತಮ್ ಮನೆ ಮೇಲೆ ಇ.ಡಿ ದಾಳಿ

             ಚೆನ್ನೈ: ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರ ವಿಲ್ಲುಪುರಂ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.

               ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಅಧಿಕಾರಿಗಳು ಸಚಿವ ಪೊನ್ಮುಡಿ ಹಾಗೂ ಅವರ ಪುತ್ರ ಗೌತಮ್ ಸಿಗಮಣಿ ನಿವಾಸದಲ್ಲೂ ತಪಾಸಣೆ ನಡೆಸುತ್ತಿದ್ದಾರೆ.

           ಪೊನ್ಮುಡಿ ಅವರು 2007 ಮತ್ತು 2011ರ ನಡುವೆ ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಕ್ವಾರಿ ಪರವಾನಗಿಯನ್ನು ಉಲ್ಲಂಘಿಸಿದ್ದು, ಸಾರ್ವಜನಿಕ ಬೊಕ್ಕಸಕ್ಕೆ ₹28 ಕೋಟಿಗೂ ಹೆಚ್ಚು ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

              ಪ್ರಕರಣದ ವಿಚಾರಣೆಗೆ ತಡೆ ನೀಡುವಂತೆ ಕೋರಿ ಪೊನ್ಮುಡಿ ಮತ್ತು ಗೌತಮ್ ಅವರು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ವಿಚಾರಣೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.


                  ಇತ್ತೀಚಿಗೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಸೆಂಥಿಲ್‌ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇದಾದ ಬೆನ್ನಲ್ಲೇ ಸೆಂಥಿಲ್‌ ಬಾಲಾಜಿ ಅವರನ್ನು ಸಂಪುಟದಿಂದ ರಾಜ್ಯಪಾಲ ಆರ್‌.ಎನ್‌.ರವಿ ವಜಾಗೊಳಿಸಿದ್ದರು. ಬಳಿಕ ಅಮಾನತು ಆದೇಶವನ್ನು ಹಿಂಪಡೆದಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries