ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗುರಪೂರ್ಣಿಮೆಯಂದು ಗುರುವಂದನಾ ಕಾರ್ಯಕ್ರಮ ಜರಗಿತು. ಸಂಸ್ಕøತ ಅಧ್ಯಾಪಕ ಬಾಲಕೃಷ್ಣ ಶರ್ಮ ಗುರುಪೂರ್ಣಿಮೆಯ ಕುರಿತು ಮಾತನಾಡಿದರು. ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಭೆಮಾರ್ಗ ಹಿತವಚನಗಳನ್ನು ನುಡಿದರು. ವಿದ್ಯಾರ್ಥಿಗಳು ಗುರುನಮನ ಸಲ್ಲಿಸಿದರು. ನಂತರ ಮಾತೆಯರಿಂದ ಕುಂಕುಮಾರ್ಚನೆಗೈದರು.

.jpg)
