HEALTH TIPS

ಕಾಸರಗೋಡು-ತಿರುವನಂತಪುರಂ ಆರು ಪಥದ ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ 2025ರ ವೇಳೆಗೆ ಪೂರ್ಣ: ಸಚಿವ ಪಿಎ ಮುಹಮ್ಮದ್ ರಿಯಾಝ್

      ಮಂಜೇಶ್ವರ: ಕಾಸರಗೋಡಿನಿಂದ ತಿರುವನಂತಪುರಂವರೆಗಿನ ಆರು ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಲೋಕೋಪಯೋಗಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಪಿ.ಎ.ಮುಹಮ್ಮದ್ ರಿಯಾಝ್ ಹೇಳಿದರು.

          ಮಂಜೇಶ್ವರ ಮಂಡಲದ ಗೋವಿಂದ ಪೈ- ನೆತ್ತಿಲಪದವು ರಸ್ತೆ ಕಾಮಗಾರಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. 

        ಮಂಜೇಶ್ವರಂ ಕ್ಷೇತ್ರದ ಅಗತ್ಯತೆಗಳನ್ನು ಅರಿತು ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ವೇಗವಾಗಿ ಸಾಗುತ್ತಿದೆ ಎಂದು ಸಚಿವರು ಹೇಳಿದರು. ರಾಜ್ಯ ಜನತೆಯ ಚಿರ ಕನಸಾಗಿರುವ ಕಾಸರಗೋಡಿನಿಂದ ತಿರುವನಂತಪುರಂವರೆಗಿನ ರಾಷ್ಟ್ರೀಯ ಹೆದ್ದಾರಿಯ ನವೀಕರಣ 2025ರ ವೇಳೆಗೆ ಪೂರ್ಣಗೊಳ್ಳಲಿದೆ. ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ಮುಂದಿನ ವರ್ಷಕ್ಕೆ ಪೂರ್ಣಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿಗೆ ಶೇ.25ರಷ್ಟು ಭೂಸ್ವಾಧೀನಕ್ಕೆ 5600 ಕೋಟಿ ರೂ.ಗಳನ್ನು ಮೀಸಲಿಟ್ಟ ದೇಶದ ಮೊದಲ ರಾಜ್ಯ ಕೇರಳವಾಗಿದೆ ಎಂದು ಸಚಿವರು ಹೇಳಿದರು.


           ಶಾಸಕ ಎ.ಕೆ.ಎಂ.ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ರಸ್ತೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಕೆ. ರಾಜೀವ್ ವರದಿ ಮಂಡಿಸಿದರು. ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಮೀನಾ ಟೀಚರ್, ಮಂಜೇಶ್ವರ ಗ್ರಾಮ ಪಂಚಾಯತಿ ಅಧ್ಯಕ್ಷೆ ಜೀನ್ ಲವೀನಾ ಮೊಂತೆರೋ, ವರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಎಸ್.ಭಾರತಿ, ಜಿಲ್ಲಾ ಪಂಚಾಯತಿ ಸದಸ್ಯ ಪಿ. ಕಮಲಾಕ್ಷಿ, ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ಎನ್. ಅಬ್ದುಲ್ ಹಮೀದ್, ಬ್ಲಾಕ್ ಪಂಚಾಯತಿ ಸದಸ್ಯ ಮೊಯ್ದೀನ್ ಕುಂಞÂ, ಮಂಜೇಶ್ವರ ಗ್ರಾಮ ಪಂಚಾಯತಿ ಸದಸ್ಯ ಯಾದವ ಬಡಾಜೆ, ರಾಜಕೀಯ ಪಕ್ಷದ ಪ್ರತಿನಿಧಿಗಳಾದ ಬಿ.ಎಂ. ಕರುಣಾಕರ ಶೆಟ್ಟಿ, ಜಯರಾಮ ಬಲ್ಲಂಗುಡೇಲು, ಪಿ.ಸೋಮಪ್ಪ, ಅಜೀಜ್ ಮರಿಕೆ, ಹರಿಶ್ಚಂದ್ರ ಮಂಜೇಶ್ವರ, ರಾಘವ ಚೇರಾಲು, ತಾಜುದ್ದೀನ್ ಮೊಗ್ರಾಲ್, ಸಿದ್ದಿಕ್ ಕೈಕಂಬ, ಡಾ. ಕೆ.ಎ.ಖಾದರ್ ಹಾಗೂ ಅಹ್ಮದಲಿ ಕುಂಬಳೆ ಮಾತನಾಡಿದರು. ರಸ್ತೆ ವಿಭಾಗದ ಅಧೀಕ್ಷಕ ಅಭಿಯಂತರೆ ಯು.ಪಿ. ಜಯಶ್ರೀ ಸ್ವಾಗತಿಸಿ, ಮಂಜೇಶ್ವರ ಲೋಕೋಪಯೋಗಿ ರಸ್ತೆ ವಿಭಾಗದ ಸಹಾಯಕ ಇಂಜಿನಿಯರ್ ವಿ.ವಿ. ಮಣಿಪ್ರಸಾದ್ ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries