HEALTH TIPS

ಸಿಖ್‌ ವಿರೋಧಿ ದಂಗೆ: ಸೆ. 6ರಂದು ಟೈಟ್ಲರ್‌ ವಿರುದ್ಧದ ಪ್ರಕರಣದ ವಿಚಾರಣೆ

               ವದೆಹಲಿ: 1984ರ ಸಿಖ್‌ ವಿರೋಧಿ ದಂಗೆಯ ವೇಳೆ ದೆಹಲಿಯ ಪುಲ್‌ ಬಂಗಾಶ್‌ ಪ್ರದೇಶದಲ್ಲಿ ಮೂವರನ್ನು ಹತ್ಯೆ ಮಾಡಿ, ಗುರುದ್ವಾರಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣದ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯ ಸೆಪ್ಟೆಂಬರ್‌ 6 ರಂದು ನಡೆಸಲಿದೆ.

               ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ವಿಧಿ ಗುಪ್ತಾ ಆನಂದ್ ಅವರು, ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್‌ ಮುಖಂಡ ಜಗದೀಶ್ ಟೈಟ್ಲರ್‌ ಅವರಿಗೆ ವಾದಿಸಲು ಸಮಯಾವಕಾಶ ನೀಡಿದ್ದಾರೆ.

                 ಸಿಬಿಐ ಸಲ್ಲಿಸಿದ್ದ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವರು ಸಮಯಾವಕಾಶ ನೀಡಿದ್ದಾರೆ.

ಈ ಪ್ರಕಣದಲ್ಲಿ ಸೆಷನ್ಸ್‌ ನ್ಯಾಯಾಲಯವು ಟೈಟ್ಲರ್‌ ಅವರಿಗೆ ಈ ಹಿಂದೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries