ಮಂಜೇಶ್ವರ: ವರ್ಕಾಡಿ ಕಾವಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನೂತನ ನಮಸ್ಕಾರ ಮಂಟಪ ನಿರ್ಮಾಣಕ್ಕಾಗಿ ಶಿಲಾನ್ಯಾಸ ಸಮಾರಂಭ ಆ. 24ರಂದು ಬೆಳಗ್ಗೆ 10ಕ್ಕೆ ನಡೆಯಲಿರುವುದು. ಬ್ರಹ್ಮಶ್ರೀ ದಿನೇಶ ತಂತ್ರಿ ಶಿಲಾನ್ಯಾಸ ನಡೆಸುವರು. ಒಡಿಯೂರು ಶ್ರೀ ಗುರುದೇವಾನಂದ ಸವಾಮೀಜಿ, ಬ್ರಹ್ಮಶ್ರೀ ಕೃಷ್ಣರಾಜ ತಂತ್ರಿ ಕುಡುಪುಸಮಾರಂಭದಲ್ಲಿ ದಿವ್ಯ ಉಪಸ್ಥಿತಿ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.