HEALTH TIPS

ಆರ್ಥಿಕ ಬೆಳವಣಿಗೆಗೆ ಜಲಸಂಪನ್ಮೂಲಗಳ ಸಮರ್ಥ ನಿರ್ವಹಣೆ ಅಗತ್ಯ: ದ್ರೌಪದಿ ಮುರ್ಮು

             ವದೆಹಲಿ: ಜಲಸಂಪನ್ಮೂಲಗಳ ಸಮರ್ಥ ನಿರ್ವಹಣೆಯು ನೀರಿನ ಲಭ್ಯತೆಯ ಜೊತೆಗೆ ಆರ್ಥಿಕ ಬೆಳವಣಿಗೆಯಲ್ಲೂ ಮಹತ್ವದ ಪಾತ್ರವಹಿಸುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿಪ್ರಾಯಪಟ್ಟಿದ್ದಾರೆ.

              ರಾಷ್ಟ್ರಪತಿ ಭವನದಲ್ಲಿ ಸೋಮವಾರ ಸೆಂಟ್ರಲ್ ವಾಟರ್ ಎಂಜಿನಿಯರಿಂಗ್ ಸರ್ವಿಸ್‌ನ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರೀಕರಣ ಮತ್ತು ಅಭಿವೃದ್ಧಿಗೆ ಲಭ್ಯವಿರುವ ಸಂಪನ್ಮೂಲಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವ ಅಗತ್ಯ ಇದೆ ಎಂದಿದ್ದಾರೆ.

                   ಜಲಸಂಪನ್ಮೂಲಗಳ ನಿರ್ವಹಣೆಯು ಎಲ್ಲಾ ತಲೆಮಾರುಗಳಿಗೂ ಪ್ರಮುಖ ಮತ್ತು ಸವಾಲಿನ ಕೆಲಸವಾಗಿದೆ ಎಂದ ಅವರು ಈ ನಿಟ್ಟಿನಲ್ಲಿ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.

ಹವಾಮಾನ ವೈಪರೀತ್ಯವು ಜಲಸಂಪನ್ಮೂಲಗಳ ಮೇಲೆ ಪರಿಣಾಮ ಬೀರಲು ಆರಂಭಿಸಿದೆ ಎಂದೂ ಅವರು ಕಳವಳ ವ್ಯಕ್ತಪಡಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries