ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವುದನ್ನು ವಿರೋಧಿಸಿ ಗುರುವಾರ ಪ್ರತಿಭಟಿಸಿದ ಬಿಜೆಪಿಯ ನಾಲ್ವರು ಶಾಸಕರನ್ನು ಹೊರಹಾಕಲಾಗಿದೆ.
0
samarasasudhi
ಆಗಸ್ಟ್ 17, 2023
ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವುದನ್ನು ವಿರೋಧಿಸಿ ಗುರುವಾರ ಪ್ರತಿಭಟಿಸಿದ ಬಿಜೆಪಿಯ ನಾಲ್ವರು ಶಾಸಕರನ್ನು ಹೊರಹಾಕಲಾಗಿದೆ.
ಎಎಪಿ ಶಾಸಕ ದುರ್ಗೇಶ್ ಪಾಠಕ್ ಅವರು ಸದನದಲ್ಲಿ ಮಣಿಪುರಕ್ಕೆ ಸಂಬಂಧಿಸಿದಂತೆ ಚರ್ಚೆ ಆರಂಭಿಸಿದರು.
ಶಾಸಕರ ಪ್ರತಿಭಟನೆಯನ್ನು ಪ್ರಶ್ನಿಸಿದ ಉಪ ಸಭಾಪತಿ ರಾಖಿ ಬಿರ್ಲಾ, 'ಮಣಿಪುರ ಸಮಸ್ಯೆಯು ಸದನದಲ್ಲಿ ಚರ್ಚಿಸುವಂತಹ ವಿಚಾರವಲ್ಲ ಎಂದು ಭಾವಿಸಿದ್ದೀರಾ. ಉತ್ತರ ಪ್ರದೇಶ ವಿಧಾನಸಭೆಯಲ್ಲಿಯೂ ಮಣಿಪುರ ವಿಚಾರ ಚರ್ಚೆಯಾಗಿದೆ' ಎಂದರು.
ಆದಾಗ್ಯೂ ಬಿಜೆಪಿ ಶಾಸಕರಾದ ಆಭಯ್ ವರ್ಮಾ, ಜಿತೇಂದರ್ ಮಹಾಜನ್, ಅಜಯ್ ಮಹಾವರ್ ಮತ್ತು ಒ.ಪಿ. ಶರ್ಮಾ ಪ್ರತಿಭಟನೆ ಮುಂದುವರಿಸಿದರು. ಈ ವೇಳೆ ಮಾರ್ಷಲ್ಗಳ ಮೂಲಕ ಅವರನ್ನು ಸದನದಿಂದ ಹೊರಗೆ ಕಳುಹಿಸಲಾಯಿತು.
ಪಾಠಕ್ ಅವರು, ಮಣಿಪುರ ವಿಚಾರವಾಗಿ ಚರ್ಚೆ ನಡೆಸುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದು ದುರದೃಷ್ಟಕರ ಎಂದು ಟೀಕಿಸಿದರು. ಇದೇ ವೇಳೆ ಎಎಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.