ತಿರುವನಂತಪುರ: ಬಿಜೆಪಿ ಮುಖಂಡರಾದ ಸಂದೀಪ್ ಜಿ.ವಾರಿಯರ್ ಮತ್ತು ಪಿ.ಆರ್. ಶಿವಶಂಕರ್ ಅವರನ್ನು ಪಕ್ಷದ ರಾಜ್ಯ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ಪಾಲಕ್ಕಾಡ್ ಜಿಲ್ಲೆಯ ನಾಯಕ ಸಂದೀಪ್ ಜಿ. ವಾರಿಯರ್ ಮತ್ತು ಎರ್ನಾಕುಳಂ ಜಿಲ್ಲೆಯ ಪಿಆರ್ ಶಿವಶಂಕರ್ ಅವರನ್ನು ರಾಜ್ಯ ಸಮಿತಿ ಸದಸ್ಯರನ್ನಾಗಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ನೇಮಕ ಮಾಡಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.